ಮೈಸೂರು ಜಿಲ್ಲಾ ಪೊಲೀಸರಿಂದ ‘ತೆರೆದ ಮನೆ’ ಕಾರ್ಯಕ್ರಮ

2 0
Read Time:1 Minute, 32 Second

ಜಿಲ್ಲಾ ಪೊಲೀಸ್ ಅಧೀಕ್ಷಕರಾದರಾದ ಶ್ರೀ.ಚೇತನ್.ಆರ್.ಐಪಿಎಸ್ ರವರ ಮಾರ್ಗದರ್ಶನದಂತೆ ದಿನಾಂಕ 14-09-2021 ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸೈಂಟ್ ಅರ್ನಾಲ್ಡ್ ಶಾಲೆಯ ವಿದ್ಯಾರ್ಥಿಗಳಿಗಾಗಿ “ತೆರೆದ ಮನೆ “ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು . ಡಿವೈಎಸ್ಪಿ ಮೈಸೂರು ಗ್ರಾಮಾಂತರ ಶ್ರೀ. ಸುಮಿತ್ ರವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆ ಮಾಡದಿರುವ ಬಗ್ಗೆ, ಬಾಲ್ಯ ವಿವಾಹ ತಡೆ, ಬ್ಯಾಂಕ್ ವಂಚನೆಗಳ ಬಗ್ಗೆ ಅರಿವು ಮೂಡಿಸಿ ತುರ್ತು ಸಮಯದಲ್ಲಿ ನಮ್ಮ112 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ನಂತರ ಠಾಣಾ ಒಳಾವರಣಕ್ಕೆ ಕರೊದೊಯ್ದು ಠಾಣೆಯಲ್ಲಿ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯದ ವಿಧಾನದ ಬಗ್ಗೆ ಹೇಳಿ, ಠಾಣೆಗೆ ಬಂದಾಗ ಸಹಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬಿತ್ಯಾದಿಯಾಗಿ ತಿಳಿಸಿದರು. ದಕ್ಷಿಣ ಪೊಲೀಸ್ ಠಾಣಾ ಪಿಐ ಶ್ರೀ.ಶಶಿಕುಮಾರ್ ರವರು , ಇತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸೈಂಟ್ ಅರ್ನಾಲ್ಡ್ ಶಾಲೆಯ ವಿದ್ಯಾರ್ಥಿಗಳು ಬಹಳ ಕೌತುಕದಿಂದ ಭಾಗವಹಿಸಿ , ಪೊಲೀಸರ ಕರ್ತವ್ಯದ ವಿಧಾನದ ಬಗ್ಗೆ ತಿಳಿದುಕೊಂಡರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಅಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಲಾಗಿದೆ- ದಾವಣಗೆರೆ ಜಿಲ್ಲಾ ಪೊಲೀಸ್

ಮಾನ್ಯ ಶ್ರೀ ಟಿ.ಎಂ.ವಿಜಯಬಾಸ್ಕರ್ ಐಎಎಸ್, ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಧ್ಯಕ್ಷರು, ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರವರು ಹಾಗೂ ಶ್ರೀ ಪ್ರಸನ್ನ ಕುಮಾರ್, ಮಾನ್ಯ ನಿವೃತ್ತ ಐಎಎಸ್ ಅಧಿಕಾರಿಗಳುರವರಿಂದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆ, ಹರಿಹರ ಅಗ್ನಿಶಾಮಕ ಕಚೇರಿ, ಸಿಇಎನ್ ಠಾಣೆ ಗಳಿಗೆ ಭೇಟಿ ನೀಡಿ ಆಡಳಿತ ಸುಧಾರಣೆ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಗಳನ್ನು ಪಡೆದರು. ನಂತರ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ದಾವಣಗೆರೆ ಜಿಲ್ಲಾ […]

Get News on Whatsapp

by send "Subscribe" to 7200024452
Close Bitnami banner
Bitnami