ಇಂಡಿಯಾ ಸೈಬರ್ ಕಾಪ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ DYSP ಕೆ.ಎನ್. ಯಶವಂತಕುಮಾರ್

John Prem 9448190523
2 0
Read Time:1 Minute, 40 Second

ಬೆಂಗಳೂರು: ಪ್ರತಿಷ್ಠಿತ ಇಂಡಿಯಾ ಸೈಬರ್ ಕಾಪ್ ಆಫ್ ದಿ ಇಯರ್ -2021 ಪ್ರಶಸ್ತಿಗೆ ಸಿಐಡಿ ಸೈಬರ್ ಕ್ರೈಂ ವಿಭಾಗದ ಡಿವೈಎಸ್​ಪಿ ಕೆ.ಎನ್.ಯಶವಂತಕುಮಾರ್ ಭಾಜನರಾಗಿದ್ದಾರೆ.

ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆ ರಾಷ್ಟ್ರೀಯ ಮಟ್ಟದಲ್ಲಿ ಅಸಾಧಾರಣ ತನಿಖಾ ಕರ್ತವ್ಯವನ್ನು ನಿರ್ವಹಿಸಿ, ಪ್ರಕರಣವನ್ನು ಭೇದಿಸಿದ ಅಧಿಕಾರಿಗಳನ್ನು ಗುರುತಿಸುತ್ತದೆ. ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಪ್ರಚೋದನೆಗೊಳಡಿಸಿ, ಲೈಂಗಿಕ ಸ್ವರೂಪದ ಚಟುವಟಿಕೆಯಲ್ಲಿ ತೊಡಗಿಸಿದ ದೃಶ್ಯಗಳನ್ನು ತಮ್ಮ ವಶದಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಾಣಿಜ್ಯ ವ್ಯವಹಾರದಲ್ಲಿ ತೊಡಗಿಸಿಕೊಂಡ ಪ್ರಕರಣವನ್ನು ವೈಜ್ಞಾನಿಕ ಮತ್ತು ತಾಂತ್ರಿಕ ತನಿಖಾ ವಿಧಾನದಲ್ಲಿ ಭೇದಿಸಿದಕ್ಕಾಗಿ ಕೆ.ಎನ್.ಯಶವಂತಕುಮಾರ್ ‘ಸೈಬರ್ ಕಾಪ್ ಆಫ್ ದಿ ಇಯರ್ 2021’ ಪ್ರಶಸ್ತಿ ಪಡೆದಿದ್ದಾರೆ.

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್​ಫಾರ್ಮೆಷನ್ ಟೆಕ್ನಾಲಜಿ ಇಲಾಖೆಯ ಕಾರ್ಯದರ್ಶಿ, ಐಎಎಸ್ ಅಧಿಕಾರಿಯಾದ ಅಜಯ್ ಪ್ರಕಾಶ್ ಸಾಹನಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ದೇಶದ ವಿವಿಧ ರಾಜ್ಯಗಳ 55ಕ್ಕೂ ಅಧಿಕ ಅತ್ಯುನ್ನತ ಮಟ್ಟದ ತನಿಖೆಯ ಪ್ರಕರಣಗಳು ಸ್ಪರ್ಧೆಯಲ್ಲಿದ್ದವು. ಅವುಗಳ ಪೈಕಿ ಉತ್ತರಾಖಂಡ್, ಆಂಧ್ರಪ್ರದೇಶ, ಕರ್ನಾಟಕದ ಪ್ರಕರಣಗಳು ಕೊನೆ ಸುತ್ತಿನಲ್ಲಿ ಆಯ್ಕೆ ಆಗಿದ್ದವು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಹೊಸ ವರ್ಷಾಚರಣೆಗೆ ನಿರ್ಬಂಧ ಕರ್ನಾಟಕ ಸರ್ಕಾರದಿಂದ ಮಾರ್ಗಸೂಚಿ

ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ. ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು. ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ […]

Get News on Whatsapp

by send "Subscribe" to 7200024452
Close Bitnami banner
Bitnami