ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಛೇರಿಯಲ್ಲಿ ವಿಶ್ವ ಹಿರಿಯರ ನಿಂದನೆ ಜಾಗೃತಿ ದಿನ ಸಮಾರಂಭ

0 0
Read Time:1 Minute, 47 Second

ದಿನಾಂಕ: 15.06.2023 ರಂದು ಬೆಳಿಗ್ಗೆ 11-00 ಗಂಟೆಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಛೇರಿಯಲ್ಲಿ ವಿಶ್ವ ಹಿರಿಯರ ನಿಂದನೆ ಜಾಗೃತಿ ದಿನ ಸಮಾರಂಭವನ್ನು ಬೆಂಗಳೂರು ನಗರ ಪೊಲೀಸ್‌ ಹಾಗೂ ಹಿರಿಯರ ಸಹಾಯವಾಣಿ ಮತ್ತು ನೈಟಿಂಗಲ್ ಮೆಡಿಕಲ್ ಟ್ರಸ್ಟ್‌ನ ಸಹಯೋಗದೊಂದಿಗೆ ಆಯೋಜಿಸಲಾಗಿರುತ್ತದೆ.
ಈ ಸಭೆಗೆ ಮಾನ್ಯ ಶ್ರೀ ಬಿ. ದಯಾನಂದ್, ಐ.ಪಿ.ಎಸ್. ಪೊಲೀಸ್ ಆಯುಕ್ತರು, ಬೆಂಗಳೂರು
ನಗರ. ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿರುತ್ತಾರೆ. ಸಮಾರಂಭದಲ್ಲಿ ಡಾ. ರಾಧಾ .ಎಸ್‌. ಮೂರ್ತಿ,
ಮ್ಯಾನೇಜಿಂಗ್‌ ಟ್ರಸ್ಟಿ, ನೈಟಿಂಗಲ್‌ ಮೆಡಿಕಲ್ ಟ್ರಸ್ಟ್, ಶ್ರೀ ಎಸ್. ಪ್ರೇಮಕುಮಾರ್ ರಾಜಾ, ಕಾರ್ಯದರ್ಶಿಗಳು,
ನೈಟಿಂಗಲ್ ಮೆಡಿಕಲ್ ಟ್ರಸ್ಟ್, ರವರುಗಳು ಉಪಸ್ಥಿತರಿದ್ದರು.
ಪೊಲೀಸ್ ಅಧಿಕಾರಿಗಳಿಂದ ಕಾರ್ಯಕ್ರಮದಲ್ಲಿ ಸೈಬರ್ ಅಪರಾಧದ ಬಗ್ಗೆ ಹಾಗೂ ಹಿರಿಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಪೊಲೀಸರ ಪಾತ್ರದ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಲಾಯಿತು. ಹಾಗೂ ಸಮಾರಂಭದಲ್ಲಿ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳ ಬಗ್ಗೆ ಮಾನ್ಯ ಪೊಲೀಸ್ ಆಯುಕ್ತರ ಬಳಿ ಚರ್ಚಿಸಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಹಾಗೂ ಹಿರಿಯರಿಗೆ ಗೌರವ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲು ಸೂಕ್ತ ಸೂಚನೆಗಳನ್ನು ನೀಡಿರುತ್ತಾರೆ. ಹಾಗೂ ಹಿರಿಯ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ 1090 ,14567 ನಂಬರ್‌ಗಳಿದ್ದು ಕರೆಮಾಡಿ ಸಮಪಯೋಗ ಪಡೆದುಕೊಳ್ಳಬಹುದು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ, 6,00,000/-ರೂ ಮೌಲ್ಯದ 12 ದ್ವಿ ಚಕ್ರ ವಾಹನಗಳ ವಶ.

ಮತಿ ಲಲಿತ್ ದಿನೇಶ್‌ರವರು ತಮ್ಮ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ದಿನಾಂಕ: 24.05.2023 ರಂದು ರಾತ್ರಿ ಕೆ.ಎಸ್.ಲೇಔಟನ ವಿಠಲನಗರದಲ್ಲಿರುವ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದು, ಮರುದಿನ ಬೆಳಿಗ್ಗೆ ನೋಡಲಾಗಿ ಸದರಿ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳವು ಮಾಡಿಕೊಂಡು ಹೋಗಿದ್ದು, ಈ ಸಂಬಂಧ ಪಿರಾದುದಾರರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿಸಿಕೊಂಡು ಕಾರ್ಯಪ್ರವೃತ್ತರಾದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾಧಿಕಾರಿಗಳು ಬೆಂಗಳೂರು ನಗರದಲ್ಲಿ ರಾತ್ರಿ ವೇಳೆ ಮನೆಗಳ […]

Get News on Whatsapp

by send "Subscribe" to 7200024452
Close Bitnami banner
Bitnami