ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ, ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶ : ಬಸವನಗುಡಿ ಪೊಲೀಸ್‌ಠಾಣೆಯ ಕಾರ್ಯಾಚರಣೆ

0 0
Read Time:2 Minute, 18 Second

ಬೆಂಗಳೂರು ನಗರದ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನಯ ಮುಂದೆ ನಿಲ್ಲಿಸಿದ್ದ ದ್ವಿಚರ್ಕ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಗಳ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಬಸವನಗುಡಿ ಠಾಣೆಯ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರವಾಹನಗಳ ಕಳವು ಪ್ರಕರಣದ ಪತ್ತೆ ಕಾರ್ಯ ಸಮಯದಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಇದುವರೆಗೂ 14 ದ್ವಿಚಕ್ರ ವಾಹನಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು, ಆರೋಪಿಗಳು ವಿಚಾರಣೆ ಸಂದರ್ಭದಲ್ಲಿ ತಿಳಿಸಿರುವಂತೆ ಬೆಂಗಳೂರು ನಗರ ಮತ್ತು ತಾವರೆಕೆರೆ, ಮಾಗಡಿ ರಸ್ತೆ ಕಡೆಗಳಲ್ಲಿ ಇನ್ನಷ್ಟು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.

ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಪಿ.ಕೃಷ್ಣಕಾಂತ್, ಐ.ಪಿ.ಎಸ್. ಮತ್ತು ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಕೆ.ವಿ.ಶ್ರೀನಿವಾಸ್‌ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಕ್ಟರ್‌ ಸುಬ್ರಹ್ಮಣ್ಯ ಸ್ವಾಮಿ.ಎಂ.ಎಲ್ ರವರ ನೇತೃತ್ವದಲ್ಲಿ ಸಬ್‌ ಇನ್ಸ್‌ಕ್ಷ‌ ಮಂಜುನಾಥ ಎನ್.ವಿ, ಹಾಗೂ ಸಿಬ್ಬಂದಿಗಳಾದ ರಮೇಶ.ಎನ್, ಕಿರಣ್, ಸಂತೋಷ್ ಮತ್ತು ಪಾರ್ಥ ವಿಜಯ ರವರುಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಮಾನ್ಯ ಬೆಂಗಳೂರು ಪೊಲೀಸ್ ಕಮಿಷನರ್ ಶ್ರೀ.ಬಿ.ದಯಾನಂದ, ಅವರು ಮತ್ತು ಮಾನ್ಯ ಪಶ್ಚಿಮ ವಿಛಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ.ಸತೀಶ್ ಕುಮಾರ್ , ಐ.ಪಿ.ಎಸ್. ರವರು ಶ್ಲಾಘಿಸಿರುತ್ತಾರೆ.

ವರದಿ : ಆಂಟೋನಿ ಬೇಗೂರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ. 20 ಕೆ.ಜಿ 868 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ವಶ : ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಕಾರ್ಯಾಚರಣೆ

ದಿನಾಂಕ: 03/07/223 ರಂದು ಸಂಜೆ 5 ಗoಟೆಯ ಸಮಯದಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ಸರಹದ್ದಿನ, ಎಸ್.ಎಸ್.ಎಂ ಸ್ಕೂಲ್ ಹತ್ತಿರದ ಬಿ.ಬಿ.ಎಂ.ಪಿ ಆಟದ ಮೈದಾನ ಬಳಿ ಯಾರೋ ಒಬ್ಬ ಆಸಾಮಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಯುವಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆಂದು ಭಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಪಂಚರು ಮತ್ತು ಸಿಬ್ಬಂದಿಗಳೊಂದಿಗೆ ಸದರಿ ವ್ಯಕ್ತಿ ಮೇಲೆ ದಾಳಿ ಮಾಡಿ ಒಬ್ಬ ಆಸಾಮಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. […]

Get News on Whatsapp

by send "Subscribe" to 7200024452
Close Bitnami banner
Bitnami