ಮನೆಗಳಲ್ಲಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯ ಬಂಧನ,ಸುಮಾರು 150 ಗ್ರಾಂ ಚಿನ್ನ ವಶ, ಮೌಲ್ಯ ರೂ.9,00,000/- ಲಕ್ಷ : ರಾಜರಾಜೇಶ್ವರಿನಗರ ಪೊಲೀಸರ ಕಾರ್ಯಾಚರಣೆ

1 0
Read Time:1 Minute, 27 Second

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಶ್ರೀ ಕರುಣಕುಮಾರ್ ಎಂಬುವರ ಮನೆಯಲ್ಲಿ ಚಿನ್ನದ ಆಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿರುತ್ತಾರೆಂದು ನೀಡಿದ ದೂರಿನ ಮೇರೆಗೆ, ರಾಜರಾಜೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಮುಂದುವರೆಸಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಅರೋಪಿಯು ನೀಡಿದ ಮಾಹಿತಿ ಮೇರೆಗೆ, ಸುಮಾರು ರೂ.9,00,000 ಲಕ್ಷ ಬೆಲೆ ಬಾಳದ 150 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ನಗರದ ಮಾನ್ಯ ಡಿ.ಸಿ.ಪಿ ಪಶ್ಚಿಮ ರವರಾದ ಶ್ರೀ ಲಕ್ಷ್ಮಣ್ ಬ ನಿಂಬರಗಿ, ಕೆಂಗೇರಿಗೇಟ್ ಉಪ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಭರತ್.ಎಸ್.ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಎಂ. ಶಿವಣ್ಣ ರವರ ನೇತೃತ್ವದ ಸಿಬ್ಬಂದಿರವರುಗಳ ತಂಡ ಕಾರ್ಯಚಾರಣೆ ಮಾಡಿ ಆರೋಪಿಯನ್ನು ಪತ್ತೆ ಮಾಡಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಒಂಟಿಯಾಗಿ ನಡೆದುಕೊಂಡು ಹೋಗುವ ಮಹಿಳೆಯರ ಕತ್ತಿನಿಂದ ಚಿನ್ನದ ಸರಗಳನ್ನು ಕಿತ್ತುಕೊಂಡು ಹೋಗುತ್ತಿದ್ದ ಆರೋಪಿಯ ಬಂಧನ : ಬನಶಂಕರಿ ಪೊಲೀಸ್ ಠಾಣೆ

ಜನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ 23 ನೇ ಮುಖ್ಯರಸ್ತೆಯಲ್ಲಿ ಫಿರ್ಯಾದುದಾರರು ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಒಬ್ಬ ಅಪರಿಚಿತ ವ್ಯಕ್ತಿಯು ಏಕಾಏಕಿ ಫಿರ್ಯಾದುದಾರರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ, ಸರಗಳ್ಳತನ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಪೊಲೀಸರು ತನಿಖೆಯನ್ನು ಕೈಗೊಂಡು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ, ರೂ.9,40,000/- ಮೌಲ್ಯದ ಒಟ್ಟು 150 ಗ್ರಾಂ […]

Get News on Whatsapp

by send "Subscribe" to 7200024452
Close Bitnami banner
Bitnami