ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಒಬ್ಬ ಆಸಾಮಿಯ ಬಂಧನ : ಗೋವಿಂದರಾಜನಗರ ಪೊಲೀಸ್ ಕಾರ್ಯಾಚರಣೆ

0 0
Read Time:1 Minute, 54 Second

ಗೋವಿಂದರಾಜ ನಗರ ಪೊಲೀಸ್ ಠಾಣಾ ಸರಹನ ಗಂಗಾಧರ ಲೇಔಟ್‌ ರಸ್ತೆ, ಕಾರ್ಡಿಯಲ್ ಸ್ಕೂಲ್ ಪಕ್ಷದ ಸಾರ್ವಜನಿಕ ರಸ್ತೆಯಲ್ಲಿ ದಿನಾಂಕ:16.08.2023 ರಂದು ಬೆಳಗ್ಗೆ 10-00 ಗಂಟೆ ಸಮಯದಲ್ಲಿ ಒಬ್ಬ ಅಸಾಮಿಯು ತನ್ನ ವಶದಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ , ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ಮಾಡಿ ಒಬ್ಬ ಆಸಾಮಿಯನ್ನು ದಸ್ತಗಿರಿ ಮಾಡಿ , ಆತನನ್ನು
ವಶಕ್ಕೆ ಪಡೆದು ಆತನ ವಶದಿಂದ 1.50.000/- ಸಾವಿರ ರೂ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಬಗ್ಗೆ ಆರೋಪಿಯ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್
ಪ್ರಕಾರ ಪ್ರಕರಣ ದಾಖಲಸಿ ತನಿಖೆ ಕೈಗೊಂಡಿದ್ದು ತಲೆಮರೆಸಿಕೊಂಡಿರುವ ಮತ್ತೊಬ್ಬ ಆಸಾಮಿಯ ಪತ್ತೆ
ಕಾರ್ಯ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ, ಉಪ ಪೊಲೀಸ್ ಆಯುಕ್ತರಾದ, ಮಾನ್ಯ ಶ್ರೀ ಲಕ್ಷ್ಮಣ್ ಬ ನಿಂಬರಗಿ ರವರ ಮಾರ್ಗದರ್ಶನದಲ್ಲಿ ಶ್ರೀ ಚಂದನ್‌ಕುಮಾರ್‌ ಸಹಾಯಕ ಪೊಲೀಸ್ ಆಯುಕ್ತರು, ವಿಜಯನಗರ ಉಪ-ವಿಭಾಗ ರವರ ನೇತೃತ್ವದಲ್ಲಿ ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಆಸ್ ಇನ್ಸ್‌ಪೆಕ್ಟರ್ ಶ್ರೀ ಸುಬ್ರಮಣಿ ಕೆ. ಹಾಗೂ ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸಿ ಮಾಲನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳನ್ನು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮನೆ ಕಳವು ಮಾಡುತ್ತಿದ್ದ ಆರೋಪಿಯ ಬಂಧನ : ಮಲ್ಲೇಶ್ವರಂ ಪೊಲೀಸರ ಕಾರ್ಯಾಚರಣೆ

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ದಿನಾಂಕ 11-08-2023 ರಂದು ಮನೆಯ ಬಾಗಿಲ ಬೀಗ ಮುರಿದು ಚಿನ್ನ, ಬೆಳ್ಳಿ ಮತ್ತು ಕಂಚಿನ ದೇವರ ಸಾಮಾಗ್ರಿಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು, ಪಿರಾದುದಾರರು ನೀಡಿದ ದೂರಿನ ಮೇರೆಗೆ, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಹಗಲು ಕನ್ನಾ ಕಳವು ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಕೈಗೊಂಡು ಕಾರ್ಯವ್ಯವೃತ್ತರಾದ ಪೊಲೀಸರು ಕೃತ್ಯ ನಡೆದ ಸ್ಥಳದ ಸಮೀಪದ ಹಲವಾರು ಸಿ.ಸಿ.ಟಿ.ವಿಗಳನ್ನು ಪರಿಶೀಲಿಸಿ, ದಿನಾಂಕ: 14/8/2023 ರಂದು […]

Get News on Whatsapp

by send "Subscribe" to 7200024452
Close Bitnami banner
Bitnami