ಚಿನ್ನಾಭರಣ ಹಾಗೂ ವಜ್ರದ ಆಭರಣಗಳನ್ನು ಕಳವು ಮಾಡಿದ್ದ ಖಾಸಗಿ ಕ್ಯಾಬ್ ಚಾಲಕನ ಬಂಧನ:ಯಲಹಂಕ ಉಪನಗರ ಪೊಲೀಸ್‌ ಠಾಣೆ

0 0
Read Time:1 Minute, 57 Second

ಸಂಬಂಧಿಕರ ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದವರ ಸೂಟ್‌ಕೇಸ್‌ನಲ್ಲಿದ್ದ ಚಿನ್ನಾಭರಣ
ಮತ್ತು ವಜ್ರದ ಒಡವೆಗಳು ಕಳ್ಳತನವಾಗಿರುವ ಬಗ್ಗೆ, ಯಲಹಂಕ ಉಪನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಿದ ಯಲಹಂಕ ಉಪನಗರ ಪೊಲೀಸರು ಏರಾದುದಾರರು ಹೋಟೆಲ್‌ನಿಂದ ಮದುವೆಗೆ ಓಡಾಡಲು ಬಾಡಿಗೆಗೆ ಪಡೆದಿದ್ದ ಕಾರ್ ಚಾಲಕನನ್ನು ಬಂಧಿಸಿ, ಕಳುವಾಗಿದ್ದ ಸುಮಾರು 30,00,000/- ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಹಾಗೂ 17.5 ಕ್ಯಾರೆಟ್ ತೂಕದ ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಪಿರಾದುದಾರರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅವರು ತಂಗಿದ್ದ ಹೋಟೆಲ್ ರೂಂ ಖಾಲಿ
ಮಾಡಿಕೊಂಡು ಹೊರಡುವ ಸಂದರ್ಭದಲ್ಲಿ, ಒಡವೆಗಳಿದ್ದ ಸೂಟ್ ಕೇಸ್‌ನ್ನು ಕಾರಿನಲ್ಲಿರಿಸಿ, ರೂಂ ಕಿ
ಹಿಂದಿರುಗಿಸಿ ಬರಲು ತೆರಳಿದ್ದಾಗ ಕಾರ್ ಚಾಲಕ ಒಡವೆಗಳನ್ನು ಸೂಟ್‌ಕೇಸ್‌ನಿಂದ ಕಳವು ಮಾಡಿರುವುದಾಗಿ
ತನಿಖೆಯಿಂದ ತಿಳಿದುಬಂದಿರುತ್ತದೆ. ತನಿಖೆ ಮುಂದುವರೆದಿರುತ್ತದೆ.
ಈಶಾನ್ಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ ಬಿ.ಎಮ್. ಲಕ್ಷ್ಮೀ ಪ್ರಸಾದ್‌, ರವರ ಮಾರ್ಗದರ್ಶನದಲ್ಲಿ ಯಲಹಂಕ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮಂಜುನಾಥ್ ರವರ ನೇತೃತ್ವದಲ್ಲಿ ಯಲಹಂಕ ಉಪನಗರ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು,ಬಿ., ಹಾಗೂ ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಲೋಕಾಯುಕ್ತ ಡಿವೈಎಸ್ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ,ಹಣ ವಸೂಲಿ ಮಾಡುತ್ತಿದ್ದ ಆರೋಪಿಯ ಬಂಧನ.

ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿ.ವೈ.ಎಸ್.ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ ಕೇಸಿನ ಕಡತ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ, ಕೇಸನ್ನು ಮುಕ್ತಾಯ ಮಾಡಲು ಹಣ ನೀಡಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುತ್ತೇನೆಂದು ಸುಳ್ಳು ಹೇಳಿ ಹಣಕ್ಕೆ ಒತ್ತಾಯ ಮಾಡುತ್ತಿದ್ದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Get News on Whatsapp

by send "Subscribe" to 7200024452
Close Bitnami banner
Bitnami