ಗದಗ ಸಂಚಾರ ಠಾಣಾ ವ್ಯಾಪ್ತಿಯಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ

Admin
0 1
Read Time:1 Minute, 38 Second

ಜನವರಿ 18ರಿಂದ ಫೆಬ್ರವರಿ 17ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಆಚರಿಸಲಾಗುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸುವಂತೆ ಸಂಚಾರ ಪೊಲೀಸರಿಗೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಗದಗ ಸಂಚಾರ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಾತಾ ಮೂಲಕ ತಿಳುವಳಿಕೆ ಅಭಿಯಾನವನ್ನು ನಡೆಸಿದ್ದು, ಈ ಕಾಲಕ್ಕೆ ವಾಹನಗಳಿಗೆ ರಿಫ್ಲೆಕ್ಟರ್ ಅಳವಡಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳುವಳಿಕೆ ನೀಡಿದ್ದು ಇರುತ್ತದೆ.30 ದಿನಗಳ ಸುರಕ್ಷತಾ ಮಾಸದಲ್ಲಿ ನಗರದ ಪ್ರತಿ ಜಂಕ್ಷನ್‌ನಲ್ಲಿ ಹೆಚ್ಚಿನ ಸಂಖ್ಯೆಯ ಸಂಚಾರ ಪೊಲೀಸರನ್ನು ಕಾಣಬಹುದಾಗಿದೆ. ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ, ಅತಿ ವೇಗದ ಚಾಲನೆ, ಫುಟ್‌ಪಾತ್‌ ಮೇಲೆ ವಾಹನ ಚಾಲನೆ, ಒನ್‌ವೇನಲ್ಲಿ ಸಂಚಾರ ಸೇರಿದಂತೆ 15 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ಪೊಲೀಸರು ಗಮನಹರಿಸಲಿದ್ದಾರೆ. ಅಲ್ಲದೇ ಅಪಘಾತ ಪ್ರಕರಣಗಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಹಲವಾರು ಜಾಗೃತಿ ಜಾಥಾಗಳನ್ನು ನಡೆಸುತ್ತಿದ್ದಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಾಚರಣೆ

ದಿನಾಂಕ 02.02.2021 ರಂದು ಬೆಳಿಗ್ಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಬಂಟ್ವಾಳ ಸೂರಿಕುಮೇರು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರನ್ನೊಳಗೊಂಡಂತೆ ವಿಟ್ಲ ಪೊಲೀಸ್ ಠಾಣೆ, ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಮತ್ತು ಪುತ್ತೂರು ಸಂಚಾರ ಪೊಲೀಸ್ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಸ್ಥಳಕ್ಕೆ ಸಂಪರ್ಕಿಸುವ ಮಾಣಿ ಜಂಕ್ಷನ್, […]

Get News on Whatsapp

by send "Subscribe" to 7200024452
Close Bitnami banner
Bitnami