ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸಭೆ

Admin
1 0
Read Time:1 Minute, 49 Second

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದಿನಾಂಕ:05.02.2021 ರಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸಭೆಯನ್ನು ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರ ಜೊತೆಗೆ ಕಾಯ್ದೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್.ಮನ್ನಿಕೇರಿ ಐ.ಎ.ಎಸ್., ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದವರಿಗೆ, ಮೊದಲ ಸಲ ಅಪರಾದಕ್ಕೆ 3 ವರ್ಷದಿಂದ 7 ವರ್ಷ ಕಾರಾಗೃಹವಾಸ ಅಥವಾ ಒಂದು ಜಾನುವಾರಿಗೆ ರೂ. 50,000/-ಗಳಂತೆ ರೂ. 5 ಲಕ್ಷದವರೆಗೆ ತಂಡ ವಿಧಿಸಬಹುದಾಗಿದೆ. ಮುಂದುವರೆದ ಅಪರಾಧಕ್ಕೆ ರೂ.1 ಲಕ್ಷದಿಂದ 10 ಲಕ್ಷದವರೆಗೆ ದಂಡ ಅಥವಾ 7 ವರ್ಷ ಕಾರಾಗೃಹವಾಸ ದಂಡನೆ ವಿಧಿಸಬಹುದಾಗಿದೆ ಎಂದು ತಿಳಿಸಿರುತ್ತಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ರಾಧಿಕಾ, ಐ.ಪಿ.ಎಸ್., ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಡಿವೈಎಸ್ಪಿ ಪಾಂಡುರಂಗ, ತಹಶೀಲ್ದಾರ್ಗಳು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು, ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬಿ.ಬಿ.ಎಂ.ಪಿ. ಮಾರ್ಷಲ್ ಮೇಲೆ ಹಲ್ಲೆ ಪ್ರಕರಣ ದಾಖಲು

ಕೊರೋನಾವೈರಸ್ ಇನ್ನೂ ತೊಲಗಿಲ್ಲ ಆದರೆ ಕೆಲವರು ಮಾಸ್ಕ್ ಧರಿಸದೇ ಬಿ.ಬಿ.ಎಂ.ಪಿ ಮಾರ್ಷಲ್ ಮೇಲೆ ಹಲ್ಲೆ ಆರೋಪ ಕೇಳಿಬರುತ್ತದೆ .ಇದೇ ರೀತಿ ಘಟನೆ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಬಿಎಂಪಿ ಮಾರ್ಷಲ್ ಮೇಲೆ ಹಲ್ಲೆ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ . ಈ ಘಟನೆ ಗುರುವಾರದಂದು ನಡೆದಿದೆ ,ಬಿಬಿಎಂಪಿ ಮಾರ್ಷಲ್ ಎಸ್ ಯುವಿ ಕಾರನ್ನು ನಿಲ್ಲಿಸಿದರು ಅದರಲ್ಲಿ 7 ವ್ಯಕ್ತಿಗಳು ಉಪಯೋಗಿಸುತ್ತಿದ್ದರು ಅದರಲ್ಲಿ 4 ವ್ಯಕ್ತಿಗಳು ಮಾಸ್ಕ್ ಧರಿಸದೇ […]

Get News on Whatsapp

by send "Subscribe" to 7200024452
Close Bitnami banner
Bitnami