ತೇಗದ ಮರ ಕಳ್ಳಸಾಗಣಿಕೆ, ಆರೋಪಿಗಳ ಬಂಧನ

0 0
Read Time:3 Minute, 11 Second

ದಿನಾಂಕ 14-06-2021 ರಂದು ಕಾಫೀ ತೋಟವೊಂದರಿಂದ ತೇಗದ ಮರವನ್ನು ಅಕ್ರಮವಾಗಿ ಕಡಿದು ಮಾರುತಿ ಒಮ್ನಿ ವ್ಯಾನಿನಲ್ಲಿ ತುಂಬಿ ಕಳ್ಳ ಸಾಗಾಣಿಕೆ ಮಾಡುತ್ತಿರುವುದಾಗಿ ದೊರೆತ ಮಾಹಿತಿ ಮೇರೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೋಕು ವಾಲ್ನೂರು-ತ್ಯಾಗತ್ತೂರು ಜಂಕ್ಷನ್ ನಲ್ಲಿ ಒಮ್ನಿ ವ್ಯಾನನ್ನು ಪತ್ತೆಹಚ್ಚಿದ ಜಿಲ್ಲಾ ಡಿಸಿಐಬಿ ತಂಡ ಮಾಲು ಸಮೇತ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಸಿದ್ದಾಪುರ ಠಾಣಾ ಸರಹದ್ದಿನ ಚೆಟ್ಟಳ್ಳಿ ಕಾನನಕಾಡು ವ್ಯಾಪ್ತಿಯ ಕಾಫೀ ತೋಟವೊಂದರಿಂದ ತೇಗದ ಮರವನ್ನು ಅಕ್ರಮವಾಗಿ ಕಡಿದು ಒಮ್ನಿ ವ್ಯಾನಿನಲ್ಲಿ ಸುತ್ತಲೂ ಟೀ-ಶರ್ಟ್ಸ್ ಹಾಗೂ ಆಫ್-ಪ್ಯಾಂಟ್ ಗಳನ್ನು ನೇತು ಹಾಕಿ ಬಟ್ಟೆವ್ಯಾಪಾರ ಮಾಡುವ ಸೋಗಿನಲ್ಲಿ ವಿವಿಧ ಅಳತೆಯ 6 ತೇಗದ ಮರದ ನಾಟಾಗಳನ್ನು ತುಂಬಿ ಸಾಗಾಟ ಮಾಡುತ್ತಿದ್ದವರನ್ನು ಪತ್ತೆಹಚ್ಚಿ ದಾಳಿ ನಡೆಸಿದ ಜಿಲ್ಲಾ ಡಿಸಿಐಬಿ ನಿರೀಕ್ಷಕರವರ ತಂಡ ಆರೋಪಿಗಳಾದ ಟಿ.ವಿ ಲೊಹಿತ್, ತಂದೆ ಲೇಟ್ ವಾಸು, ಪ್ರಾಯ 26 ವರ್ಷ, ಚಾಲಕ ವೃತ್ತಿ, ವಾಸ ಅಂಗನವಾಡಿ ಹತ್ತಿರ ನೀರುಕೊಲ್ಲಿ, ಮಡಿಕೇರಿ ಹಾಗೂ ಟಿ.ಎಸ್ ಕೀರ್ತಿ, ತಂದೆ ಶ್ರೀಧರ್, ಪ್ರಾಯ 28ವರ್ಷ, ಕೂಲಿ ಕೆಲಸ, ವಾಸ ಮೆಕೇರಿ ಗ್ರಾಮ, ಮಡಿಕೇರಿ ಇವರನ್ನು ಬಂಧಿಸಿ ಆರೋಪಿತರಿಂದ ರೂ.1.5 ಲಕ್ಷ ಮೌಲ್ಯದ 6 ತೇಗದ ಮರದ ನಾಟಾಗಳು ಒಮ್ನಿ ವ್ಯಾನ್ ಸೇರಿದಂತೆ ಒಟ್ಟು 3 ಲಕ್ಷ ಮೌಲ್ಯದ ಸೊತ್ತುಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಾಚರಣೆಯು ಜಿಲ್ಲಾ ಡಿಸಿಐಬಿ ವಿಭಾಗದ ಪಿ.ಐ. ಶ್ರೀ ಎನ್.ಕುಮಾರ್ ಆರಾಧ್ಯರವರ ನೇತೃತ್ವದಲ್ಲಿ ನಡೆದಿದ್ದು ಕಾರ್ಯಾಚರಣೆ ಯಲ್ಲಿ ಸಿಬ್ಬಂದಿಗಳಾದ ಬಿ.ಎಲ್. ಯೊಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಆರ್. ವಸಂತ, ಕೆ.ಎಸ್.ಅನಿಲ್ ಕುಮಾರ್, ವಿ.ಜಿ. ವೆಂಕಟೇಶ್, ಬಿ.ಜಿ.ಶರತ್ ರೈ, ಸುರೇಶ್ ಮತ್ತು ಶಶಿಕುಮಾರ್ ರವರು ಭಾಗಿಯಾಗಿದ್ದು ಇವರ ಕಾರ್ಯವನ್ನು ಪ್ರಶಂಸಿಸಲಾಗಿದೆ. ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ಬೆಲೆಬಾಳುವ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಈ ಬಗ್ಗೆ ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿವರ್ಗದವರಿಗೆ ಕಾನೂನು ಕ್ರಮಕೈಗೊಳ್ಳುವ ಬಗ್ಗೆ ಸೂಚನೆ ನೀಡಲಾಗಿರುತ್ತದೆ. ಸಾರ್ವಜನಿಕರು ಇಂತಹ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಕೋರಿದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ವಾಹನ ಕಳವು ಪ್ರಕರಣ ಪತ್ತೆ, ಇಬ್ಬರು ಆರೋಪಿಗಳ ಬಂಧನ

ಕೊಡಗು ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ವಾಹನಗಳನ್ನು ಕಳುವು ಮಾಡುತ್ತಿದ್ದ ಆರೋಪಿತರನ್ನು ಬಂಧಿಸುವಲ್ಲಿ ಶನಿವಾರಸಂತೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರಸಂತೆ ಠಾಣಾ ಸರಹದ್ದಿನ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಸುತ್ತಮುತ್ತ ಹಾಗೂ ಹಾಸನ ಕಡೆಗಳಲ್ಲಿ ಮನೆಯ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನು ಮತ್ತು ವಾಹನಗಳನ್ನು ನಿಲ್ಲಿಸಿ ವಾಹನದಲ್ಲಿ ಕೀ ಬಿಟ್ಟು ಹೋಗುವವರನ್ನು ಗಮನಿಸಿ ಕಾರು,ಬೈಕ್,ಸ್ಕೂಟಿಗಳನ್ನು ಕಳುವು ಮಾಡುತ್ತಿದ್ದು, ಈ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ. ದಸ್ತಗಿರಿ ಮಾಡಿದ ಆರೋಪಿಗಳ ವಿವರ:-1) […]

Get News on Whatsapp

by send "Subscribe" to 7200024452
Close Bitnami banner
Bitnami