ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ವಯೋನಿವೃತ್ತಿ ಹೊಂದಿದ ಪೊಲೀಸರಿಗೆ ಕಾರ್ಯಕ್ರಮ

John Prem

ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.

ಚಿಕ್ಕಬಳ್ಳಾಪುರ ಪೊಲೀಸ್ ವತಿಯಿಂದ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

John Prem

ಜಿಲ್ಲೆಯಲ್ಲಿ ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಎಂಬ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು, ಎಲ್ಲಾ ಠಾಣಾ ವ್ಯಾಪ್ತಿಗಳ ಪ್ರೌಢಶಾಲೆಗಳಲ್ಲಿ ದಿ:17.06.2022 ರಿಂದ ಎರಡನೇ ಹಂತವನ್ನು ಒಟ್ಟು 53 ಪ್ರೌಢಶಾಲೆಗಳಲ್ಲಿ ಪ್ರಾರಂಭಿಸಲಾಗಿದ್ದು, ಐದು ವಾರಗಳ ಕಾಲ ನಡೆಯಲಿದೆ. ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ನವ ನಾಗರಿಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು,ಸ್ವಯಂ ಶಿಸ್ತು, ನೈತಿಕತೆ,ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಪ್ರತಿರೋಧ ದಂತಹ ಸಕಾರಾತ್ಮಕ ಆಲೋಚನೆಗಳು ದಾರಿತೋರಿಸುವ […]

ಐ.ಪಿ.ಎಸ್. ಅಧಿಕಾರಿ ರವಿ ಡಿ ಚನ್ನಣ್ಣವರ್ ಅವರಿಂದ ಮಾಧ್ಯಮ ಪ್ರಕಟಣೆ

John Prem

ಆತ್ಮೀಯರೇ, ಇತ್ತೀಚಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ. ಇವುಗಳನ್ನು ನಾನು […]

ಚಿಕ್ಕಬಳ್ಳಾಪುರ ಪೊಲೀಸರಿಂದ ಕಳವು ಪ್ರಕರಣ ಪತ್ತೆ ಮಾಡಿ ಮಾಲೀಕರಿಗೆ ಹಿಂದಿರುಗಿಸಿದರು

John Prem

ದಿನಾಂಕ 13/12/2021ರಂದು ಜಿಲ್ಲಾ ಪೊಲೀಸ್ ಕಛೇರಿಯ ಕವಾಯತು ಮೈದಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021 ನೇ ಸಾಲಿನ ಆಗಸ್ಟ್ ಮಾಹೆಯಿಂದ ನವೆಂಬರ್ ಮಾಹೆಯವರೆಗೆ ವರದಿಯಾಗಿರುವ ಒಟ್ಟು 54 ಮಾಲು ಕಳ್ಳತನ ಪ್ರಕರಣಗಳಲ್ಲಿ 844.671 ಗ್ರಾಂ ಬಂಗಾರದ ಆಭರಣಗಳು ಮತ್ತು 409.309 ಗ್ರಾಂ ಬೆಲೆಯ ಬೆಳ್ಳಿ ವಸ್ತುಗಳು, ದ್ವಿ ಚಕ್ರ ವಾಹನಗಳು, ಲಾರಿ, ಕ್ಯಾಂಟರ್ ಸೇರಿದಂತೆ ಇತರೆ ವಸ್ತುಗಳು ಸೇರಿ ಒಟ್ಟು 12505575/-ರೂಗಳ ಬೆಲೆಯ ಮಾಲನ್ನು ವಶಪಡಿಸಿಕೊಂಡಿದ್ದು, ಈ ವಸ್ತುಗಳನ್ನು ಗೌರವಾನ್ವಿತ ನ್ಯಾಯಾಲಯದ […]

ಉತ್ತಮ ಕಾರ್ಯವನ್ನು ಶ್ಲಾಘಿಸಿ, ಪ್ರಶಂಸನಾ ಪತ್ರಗಳನ್ನು ನೀಡಲಾಗಿದೆ- ಚಿಕ್ಕಬಲ್ಲಾಪುರ ಜಿಲ್ಲಾ ಪೊಲೀಸ್

John Prem

ತಮ್ಮ ಠಾಣೆಗಳಲ್ಲಿ ಬಾಕಿ ಇದ್ದಂತಹ ಘೋರ ಮತ್ತು ಸಾಮಾನ್ಯ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ ಅಂತಿಮ ವರದಿಗಳನ್ನು ಶೀಘ್ರವಾಗಿ ಸಲ್ಲಿಸಿ ಕೊಳ್ಳುವ ನಿಟ್ಟಿನಲ್ಲಿ, ERSS-112 ನಲ್ಲಿ ಸಾರ್ವಜನಿಕರಿಂದ ಪಡೆದಿರುವ ದೂರುಗಳಿಗೆ ತುರ್ತಾಗಿ ಸ್ಪಂದಿಸಿ, ಹೆಚ್ಚಿನ ಪ್ರಕರಣಗಳಲ್ಲಿ ಮುದ್ದೆ ಮಾಲುಗಳನ್ನು ಘನ ನ್ಯಾಯಾಲಯಕ್ಕೆ ನೀಡಿ ಪಿ.ಆರ್. ಸಂಖ್ಯೆಗಳನ್ನು ಪಡೆಯುವಲ್ಲಿ, ಗುಪ್ತ ಮಾಹಿತಿಯನ್ನು ಸಂಗ್ರಹಿಸುವಲ್ಲಿ, ಅಪರಾಧ ಪತ್ತೆ ಕಾರ್ಯದಲ್ಲಿ ಹಾಗೂ ಎನ್ ಹೆಚ್ 7 ರಸ್ತೆಯಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳ ಬಗ್ಗೆ ಕೂಡಲೇ ಸ್ಥಳಕ್ಕೆ […]

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ

John Prem

ಬೀರೂರು ಪೊಲೀಸರು ಇತ್ತೀಚೆಗೆ ನಡೆಸಿದ ಬಂಧನ ಕಾರ್ಯಾಚರಣೆಯಲ್ಲಿ ನಾಲ್ವರು ಹೆದ್ದಾರಿ ಡಕಾಯಿತಿ ಆರೋಪಿಗಳನ್ನು ಬಂಧಿಸಿರುತ್ತಾರೆ ಮತ್ತು ಓರ್ವ ಆರೋಪಿ ಪರಾರಿಯಾಗಿದ್ದಾನೆ.ಸದರಿ ಆರೋಪಿತರುಗಳಿಂದ 10,000 / – ಮೌಲ್ಯದ ಬಜಾಜ್ ಪಲ್ಸರ್ ಬೈಕು, 45,000 / – ಮೌಲ್ಯದ 11.25 ಗ್ರಾಂ ಚಿನ್ನದ ಬಳೆ, 5000 / – ಮೌಲ್ಯದ ರೆಡ್ಮಿ ಫೋನ್ ಮತ್ತು 6070 / – ಹಣವನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ಹೃತ್ಪೂರ್ವಕವಾಗಿ ಬೀಳ್ಕೊಡುಗೆಯನ್ನು ಮಾಡಲಾಗಿದೆ.

John Prem

ಚಿತ್ರ (ಸ್ಫೋಟಕ ಪತ್ತೆ ಶ್ವಾನ) ಮತ್ತು ಡೈನ (ಅಪರಾಧ ಪತ್ತೆ ಶ್ವಾನ) ಇವುಗಳು ದಿನಾಂಕ. 17. 3 .2011 ರಿಂದ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದ ಅಂಗವಾಗಿ ಕರ್ತವ್ಯ ನಿರ್ವಹಿಸಿ, ಬಹಳಷ್ಟು ಪ್ರಕರಣಗಳ ತನಿಖೆಗಳನ್ನು ಪೂರ್ಣಗೊಳಿಸಲು ಸಹಕರಿಸಿದ್ದು, ದಿನಾಂಕ. 4.3 .2021 ತಮ್ಮ ಹತ್ತು ವರ್ಷಗಳ ಸೇವೆಯನ್ನು ಪೂರೈಸಿ ನಿವೃತ್ತಿ ಗೊಂಡಿದ್ದು, ಶ್ವಾನಗಳಿಗೆ ಜಿಲ್ಲಾ ಪೊಲೀಸ್ ಘಟಕದಿಂದ ಹೃತ್ಪೂರ್ವಕವಾಗಿ ಬೀಳ್ಕೊಡುಗೆಯನ್ನು ಮಾಡಲಾಗಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ […]

32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Admin

32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಇಂದು ಆಲ್ದೂರು ಪಟ್ಟಣದಲ್ಲಿ ವಿಭಿನ್ನವಾಗಿ ರಸ್ತೆ ಸಂಚಾರ ಸುರಕ್ಷತೆ ಕುರಿತು ತಿಳುವಳಿಕೆ ಮೂಡಿಸಿವುದರ ಜೊತೆಗೆ ಹೆಲ್ಮೆಟ್ ರಹಿತ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ,ಅಪಘಾತ ಗಳ ಬಗ್ಗೆ ಜಾಗೃತಿಯನ್ನು ಮೂಡಿಸಿ, ರಿಯಾಯಿತಿ ದರದಲ್ಲಿ ISI ಗುಣಮಟ್ಟದ ಹೆಲ್ಮೆಟ್ ಗಳನ್ನು ಕೊಡಿಸಲಾಗಿರುತ್ತದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜಿಲ್ಲೆಯ ನಾಗರಿಕ ಬಂದೂಕು ತರಬೇತಿ

Admin

ದಿನಾಂಕ 1/2/ 2021ರಿಂದ 7/2/ 2021 ರ ವರೆಗೆ ನಡೆದ ಜಿಲ್ಲೆಯ ನಾಗರಿಕ ಬಂದೂಕು ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ, ಬಂದೂಕುಗಳ ಸುರಕ್ಷತೆ ಹಾಗೂ ಎಚ್ಚರಿಕೆ ಕ್ರಮಗಳ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ತಿಳುವಳಿಕೆ ನೀಡಲಾಯಿತು ಹಾಗೂ ನೈಸರ್ಗಿಕ ವಿಪತ್ತಿನ ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಯಿತು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಚಿಕ್ಕಬಳ್ಳಾಪುರ ಪೊಲೀಸ್ ವತಿಯಿಂದ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ

Admin

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವತಿಯಿಂದ ಎಸ್ ಜೆ ಸಿ ಐ ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ “ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರವರು, ಪೊಲೀಸ್ ಅಧಿಕಾರಿಗಳು, ಎಸ್ ಜೆ ಸಿ ಐ ಟಿ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದು, ಸೈಬರ್ ಅಪರಾಧದ ಕುರಿತು ಜಾಗೃತಿ, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ವಿಷಯಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಲಾಯಿತು. ನಮ್ಮ ಮುಖ್ಯ ವರದಿಗಾರರು […]

Get News on Whatsapp

by send "Subscribe" to 7200024452
Close Bitnami banner
Bitnami