ಕೋಟ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 205/2025 ಕಲಂ: 318(3)(4) 112 ಜೊತೆಗೆ 3(5) ಬಿ.ಎನ್.ಎಸ್. 2023ರಂತೆ ದಾಖಲಾದ ಪ್ರಕರಣದಲ್ಲಿ ಶಿರಿಯಾರ ಸೇವಾ ಸಹಕಾರಿ ಸಂಘ, ಕಾವಡಿ ಶಾಖೆಯಲ್ಲಿ ಮ್ಯಾನೇಜರ್ ಆದ 1ನೇ ಆರೋಪಿ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತನಾದ 2ನೇ ಆರೋಪಿ ಹರೀಶ್ ಕುಲಾಲ್ ಇವರುಗಳು ಸಂಘಕ್ಕೆ 1 ಕೋಟಿ 70 ಲಕ್ಷ ಹಣ ವಂಚಿಸಿ, ತಲೆಮರೆಸಿಕೊಂಡಿದ್ದ ಆರೋಪಿ ಸುರೇಶ ಭಟ್(38), ಗೇರು ಬೀಜ ಪ್ಯಾಕ್ಟರಿ ಬಳಿ, ಜಾನುವಾರಕಟ್ಟೆ, ಹೆಗ್ಗುಂಜೆ ಗ್ರಾಮ, ಬ್ರಹ್ಮಾವರ ತಾಲ್ಲೂಕು, ಉಡುಪಿ ಎಂಬಾತನನ್ನು ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ರವರ ಇವರ ಮಾರ್ಗದರ್ಶನದಲ್ಲಿ ಕೋಟಾ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ಪ್ರವೀಣ ಕುಮಾರ್ ಆರ್. ಪಿ.ಎಸ್.ಐ. ( ಕಾ.&ಸು.) ಮಾಂತೇಶ್ ಜಾಭಗೌಡ, ಪಿ.ಎಸ್.ಐ. ( ತನಿಖೆ ) ಹಾಗೂ ಠಾಣಾ ಸಿಬ್ಬಂದಿಗಳಾದ ಸಿಹೆಚ್ಸಿ ಕೃಷ್ಣಶೇರೆಗಾರ, ಸಿಹೆಚ್ಸಿ ಶ್ರೀಧರ್, ಪಿಸಿ ವಿಜಯೇಂದ್ರ ಇವರುಗಳು ತಂಡ ದಸ್ತಗಿರಿ ಗೊಳಿಸಿರುತ್ತಾರೆ.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







