ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ ರೌಡಿ ಶೀಟರ್ ಗಳ ಪರೇಡ್

John Prem 9448190523
2 0
Read Time:1 Minute, 32 Second

ಇಂದು ಚಿತ್ರದುರ್ಗ ಉಪವಿಭಾಗದ ರೌಡಿ ಶೀಟರ್ ಗಳ ಪೇರೆಡ್ ನ್ನು ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಪರಶುರಾಮ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪೇರೆಡ್ ನಲ್ಲಿ ಹಾಜರಾದ ರೌಡಿ ಆಸಾಮಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಂತೆ ಎಚ್ಚರಿಕೆ ಯನ್ನು ನೀಡಿದರು. ಹಾಗೇನಾದರು ಒಂದು ವೇಳೆ ನೀವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗಡಿಪಾರು ಮಾಡಲು ಶಿಫಾರಸ್ಸು ಮಾಡುವಂತೆ ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕರಿಗೆ ತಿಳಿಸಿದರು. ಹಾಗೂ ವಯಸ್ಸಾಗಿದ್ದು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದೆ ಒಳ್ಳೆ ನಡೆತೆಯಿಂದ ಜೀವನ ಸಾಗಿಸುತ್ತಿರುವ ಆಸಾಮಿಗಳ ರೌಡಿ ಶೀಟ್ ಗಳನ್ನು ಮುಕ್ತಾಯ ಗೊಳಿಸಲು ಶಿಫಾರಸ್ಸು ಮಾಡಲು ತಿಳಿಸಿದರು. ಸದರಿ ಪೇರೆಡ್ ನಲ್ಲಿ ಶ್ರೀ ಎಸ್.ಜೆ ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕರಾದ ಪಾಂಡುರಂಗ .ಎಸ್ ರವರು ಮತ್ತು ಇತರೆ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಅತ್ತೂರು ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ […]

Get News on Whatsapp

by send "Subscribe" to 7200024452
Close Bitnami banner
Bitnami