ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಮುಂದಿಟ್ಟು ಟ್ವಿಟರ್ ಅಭಿಯಾನ ಆರಂಭಿಸಿದ ಎಸ್ ಐ!

John Prem 9448190523
2 0
Read Time:3 Minute, 26 Second

ಬೆಂಗಳೂರು: ಈ ಹಿಂದೆ ಸಾಮಾಜಿಕ ಕಾರ್ಯಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದ್ದ ಬೆಂಗಳೂರಿನ ಸಬ್ ಇನ್ಸ್ ಪೆಕ್ಟರ್ ಒಬ್ಬರು ಇದೀಗ ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ತಾಜ್ ವಿವಾಂತ ಎದುರುಗಡೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಮುಂದಾಗಿದ್ದಾರೆ. 

ಪ್ರಸ್ತುತ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್ , ಸೂಕ್ತ ಶೌಚಾಲಯವಿಲ್ಲದೆ ಸಂಕಷ್ಟಪಡುತ್ತಿರುವ ಮಹಿಳೆಯರಿಗಾಗಿ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಕಂಪರ್ಟ್ ಆಗಿರುವ  ನಿರ್ಮಿಸಲು ಬಯಸಿದ್ದಾರೆ. ತನ್ನ ತಾಯಿ ಶೌಚಕ್ಕೆ ಹೋಗಲು ಬಯಸಿದಾಗ ಆಕೆಗೆ ಸಹಾಯ ಮಾಡಲು ಆಗಿರಲಿಲ್ಲ. ಇದೇ ಕಾರಣದಿಂದ ಪ್ರಚೋದಿತರಾಗಿ ಇದೀಗ ಜಂಕ್ಷನ್ ನಲ್ಲಿ ನಿಲ್ದಾಣವೊಂದನ್ನು ನಿರ್ಮಿಸುವ ಯೋಚನೆ ಮಾಡಿದ್ದಾರೆ.

ಮಾಧ್ಯಮ ಜೊತೆಗೆ ಮಾತನಾಡಿದ ಶಾಂತಪ್ಪ ಜಡೆಮ್ಮನವರ್, ತಾನೂ ವಲಸೆ ಕಾರ್ಮಿಕ ಕುಟುಂಬದಿಂದ ಬಂದಿದ್ದು, ಮಹಿಳೆಯರು ಎದುರಿಸುವ ಕಷ್ಟಗಳನ್ನು ನೋಡಿದ್ದೇನೆ. ಬಳ್ಳಾರಿ ಬಳಿಯ ತಮ್ಮ ಊರಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದಾಗ  ಅದೇ ಜಂಕ್ಷನ್ ನಲ್ಲಿ ಶೌಚಕ್ಕೆ ಹೋಗಲು ತನ್ನ ತಾಯಿ ಪಟ್ಟ ಸಂಕಷ್ಟವೇ ಈ ನಿಲ್ದಾಣ ಸ್ಥಾಪಿಸಲು ಕಾರಣವಾಗಿದೆ. ಅಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ತನ್ನ ತಾಯಿಗೆ ಸಹಾಯ ಮಾಡಲು ಆಗಲಿಲ್ಲ, ನಂತರ ತನ್ನ ತಾಯಿಯಂತೆಯೇ ಸಂಕಷ್ಟಪಡುವ ಮಹಿಳೆಯರ ಸಮಸ್ಯೆ ನಿವಾರಿಸಲು ಮುಂದಾಗಿರುವುದಾಗಿ ತಿಳಿಸಿದರು. 

ಇದಕ್ಕಾಗಿ ಅವರು ಹಣ ಸಂಗ್ರಹಿಸಲು ಟ್ವೀಟರ್ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯ ಶಾಸಕ ಮುನಿರತ್ನ ನೆರವಾಗಿ ಹೇಳಿ 50 ದಿನ ಕಳೆದರೂ ಅವರಿಂದ ಯಾವುದೇ ಸಹಾಯ ಸಿಕ್ಕಿಲ್ಲ. ಅಂತಿಮವಾಗಿ ತನ್ನ ಸ್ವಂತ ಖರ್ಚಿನಿಂದ ಪೊರ್ಟಬಲ್ ಶೌಚಾಲಯ ನಿರ್ಮಿಸಿದ್ದಾರೆ. ಆದಾಗ್ಯೂ, ಕೆಲವರು ಇದನ್ನು ತಡೆಹಿಡಿದಿದ್ದಾರೆ. 

ಶೌಚಾಲಯ ನಿರ್ಮಾಣಕ್ಕಾಗಿ ಸಹಕರಿಸುವಂತೆ ಸಾಮಾಜಿಕ ಮಾಧ್ಯಮ ಮೂಲಕ ಕೇಳಿಕೊಳ್ಳುತ್ತೇನೆ. ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿ ಎಲ್ಲರ ಬಳಿ ಇದನ್ನು ನಾನು ಮನವಿ ಮಾಡುತ್ತೇನೆ. ವಯೋವೃದ್ಧ ತಾಯಿಯನ್ನು ಸಾರ್ವಜನಿಕ ಶೌಚಾಲಯಕ್ಕೆ ಕರೆದೊಯ್ಯಲು ಆಗಿರಲಿಲ್ಲ. ಈ ರೀತಿಯ ಸಮಸ್ಯೆಯನ್ನು ಇತರ ಮಹಿಳೆಯರು ಎದುರಿಸಬಾರದು ಎಂಬುದು ತಮ್ಮ ಉದ್ದೇಶ ಎಂದಿದ್ದಾರೆ.

2016ರ ಬ್ಯಾಚಿನ ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಜಡೆಮ್ಮನವರ್, ಬಳ್ಳಾರಿಯ ಕುಗ್ರಾಮದಿಂದ ಬಂದಿದ್ದಾರೆ. ಅವರು ವಿಜ್ಞಾನದಲ್ಲಿ ಪದವೀಧರರಾಗಿದ್ದು, ಈ ಹಿಂದೆ ಅಶೋಕ ನಗರ ಹಾಗೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಾರವಾರ ಪೊಲೀಸರು ಯಶಸ್ವಿ ಕಾರ್ಯಾಚರಣೆ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ: 23-04-2022 ರಂದು 15-30 ಗಂಟೆಗೆ ಕಾರವಾರ ಶಹರ ಪೊಲೀಸ್ ಠಾಣಾ ಪಿ.ಎಸ್.ಐ.ಸಂತೋಷಕುಮಾರ ಎಮ್, ರವರಿಗೆ ಕಾರವಾರ ಅಜ್ಜಿ ಹೊಟೇಲ್ ಹಿಂಬದಿಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡುವ ತಯಾರಿಯಲ್ಲಿರುತ್ತಾರೆ ಅಂತಾ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಸುಮನ್ ಪೆನ್ನೇಕರ ಐ.ಪಿ.ಎಸ್, ರವರ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್. ಬದರಿನಾಥ ರವರ ಮತ್ತು ಪೊಲೀಸ್ […]

Get News on Whatsapp

by send "Subscribe" to 7200024452
Close Bitnami banner
Bitnami