ಕಳವು ಪ್ರಕರಣ ಪತ್ತೆ, ಆರೋಪಿ ಬಂಧನ:

1 0
Read Time:3 Minute, 1 Second

ಪೊನ್ನಂಪೇಟೆ ಮತ್ತು ಗೋಣಿಕೊಪ್ಪ ಠಾಣಾ ಸರಹದ್ದಿನಲ್ಲಿ ವ್ಯಾಪಾರ ಮಳಿಗೆಗಳ ಕ್ಯಾಶ್ ಕೌಂಟರಿನಿಂದ ಹಣ ಕಳ್ಳತನ ಮಾಡಿದ್ದ 3 ಪ್ರತ್ಯೇಕ ಪ್ರಕರಣಗಳನ್ನು ಪೊನ್ನಂಪೇಟೆ ಠಾಣೆ ಪೊಲೀಸರ ಪತ್ತೆ ಮಾಡಿ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ಪ್ರಕರಣ-1 ದಿನಾಂಕ: 20-04-2022 ರಂದು ರಾತ್ರಿ ಪೊನ್ನಂಪೇ‌ಟೆ ನಿವಾಸಿ ಸೀತಾರಾಮ್‌ ಎಂಬುವವರು ಕಾಫಿ ಅಂಗಡಿಯ ಶೆಟರ್ಸ್‌ ಬೀಗ ವನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಕ್ಯಾಶ್‌ ಬಾಕ್ಸ್‌ ನಲ್ಲಿ ಇಟ್ಟಿದ್ದ ₹. 1,12,500 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಪ್ರಕರಣ-2 ದಿನಾಂಕ: 22-07-2022 ರಂದು ಪೊನ್ನಂಪೇಟೆ ನಗರದ ಕೌಶಲ್ಯ ಟ್ರೇಡರ್ಸ್‌ ಸಿಮೆಂಟ್‌ ಅಂಗಡಿಯ ಕ್ಯಾಶ್‌ ಬಾಕ್ಸ್‌ನ್ನು ಯಾರೋ ಕಳ್ಳರು ಒಡೆದು ₹. 10,000 ನಗದು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಪ್ರಕರಣ-3 ದಿನಾಂಕ: 26-05-2022 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಬೈಪಾಸ್‌ ರಸ್ತೆಯಲ್ಲಿರುವ ಪೂವಣ್ಣ ಎಂಬುವವರಿಗೆ ಸೇರಿದ ಡಿ.ಜಿ ಫಾರ್ಮ್ಸ್‌ ಮಳಿಗೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಫೀಡ್ಸ್‌ ಖರೀದಿ ನೆಪದಲ್ಲಿ ಮಾಲೀಕನ ಗಮನ ಬೇರೆಡೆ ಸೆಳೆದು ಡ್ರಾಯರ್‌ನಲ್ಲಿ ಇಟ್ಟಿದ್ದ ₹. 51,800 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ವಿರಾಜಪೇಟೆ ಉಪವಿಭಾಗ ಡಿವೈ.ಎಸ್‌.ಪಿ ರವರ ಮಾರ್ಗದರ್ಶನದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕರ ನೇತೃತ್ವದ ತನಿಖಾ ತಂಡ ಪ್ರಕರಣದ ಆರೋಪಿ ಹಾಸನ ನಗರದ ವಿಜಯನಗರ 2 ನೇಹಂತ, 4ನೇ ಕ್ರಾಸ್‌ ನಿವಾಸಿ ಮಹಮ್ಮದ್‌ ಇಕ್ಬಾಲ್‌ ತಂದೆ ಪೌತಿ ಜಬ್ಬಾರ್‌ ಎಂಬಾತನನ್ನು ದಸ್ತಗಿರಿ ಮಾಡಿ ಬಂಧಿತನಿಂದ ₹. 33,700 ನಗದು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಪತ್ತೆ ಕಾರ್ಯದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕರಾದ ಗೋವಿಂದರಾಜು, ಪೊನ್ನಂಪೇಟೆ ಠಾಣೆ ಪಿಎಸ್‌ಐ ಡಿ.ಕುಮಾರ್‌, ಪಿಎಸ್‌ಐ ಹೆಚ್.ಸಿ ಸುಬ್ರಹ್ಮಣ್ಯ, ಸಿಬ್ಬಂದಿಯವರಾದ ಎಂ.ಡಿ ಮನು, ಮಹದೇಶ್ವರಸ್ವಾಮಿ ಪಾಲ್ಗೊಂಡಿದ್ದರು. ಪೊಲೀಸರ ಕಾರ್ಯವನ್ನು ಶ್ಲಾಘಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸರ್ಜಾಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ ,ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]

Get News on Whatsapp

by send "Subscribe" to 7200024452
Close Bitnami banner
Bitnami