ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 3 ದ್ವಿಚಕ್ರ ವಾಹನಗಳ ವರ ಮೌಲ್ಯ ಸುಮಾರು ರೂ.1,50,000/-

0 0
Read Time:2 Minute, 2 Second

ಕಲಾಸಿಪಾಳ್ಯ ಪೊಲೀಸ್‌ ಠಾಣಾ ಸರಹದ್ದಿನ ಊರ್ವಶಿ ಥಿಯೇಟರ್ ಮುಂಭಾಗದಲ್ಲಿ ನಿಲ್ಲಿಸಿದ್ದ ಹೊಂಡಾ ಅಟ್ಟವಾ ದ್ವಿಚಕ್ರ ವಾಹನವನ್ನು ಯೊರೋ ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಶ್ರೀಪತೇಶ್ ರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ, ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಪೊಲೀಸರು ಬಾತ್ಮಿದಾರರ ಖಚಿತ ಮಾಹಿತಿಯ ಮೇರೆಗೆ ಇಬ್ಬರು ಆಸಾಮಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆರೋಪಿಗಳು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವ ಮಾಹಿತಿಯನ್ನು ನೀಡಿದ್ದು, ಅವರಿಂದ 3 ದ್ವಿಚಕ್ರ ವಾಹನಗಳನ್ನು ವರ ಪಡಿಸಿಕೊಂಡಿದ್ದು, ಇದರಿಂದ ಕಲಾಸಿಪಾಳ್ಯ ಪೊಲೀಸ್ ಠಾಣೆಯ 2 ಪ್ರಕರಣಗಳು ಹಾಗೂ ಮತ್ತೊಂದು ವಾಹನಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿರುತ್ತದೆ.
ಈ ಕಾರ್ಯಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ: ಲಕ್ಷಣ ಬಿ ನಿಂಬರಗಿ ಮತ್ತು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶ್ರೀ,ಭರತ್ ಎಸ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಎ.ಜಿ.ಮಂಜೇಗೌಡ ರವರ ನೇತೃತ್ವದ ಸಿಬ್ಬಂದಿಯವರ ತಂಡ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ಮತ್ತು ಅವರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬೈಕ್ ಕಳ್ಳತನದ ಆರೋಪಿತನ ಬಂಧನ 05 ಬೈಕ್ ಗಳು ವಶ

ದಿನಾಂಕ:-07.07 2023 ರಂದು ದಾವಣಗೆರೆ ನಗರದ ರಾಂ ಮಂದಿರ ಪಾರ್ಕ ಬಳಿ ಕೆಎ 16 ಎಕ್ಸ್ 5639 ಹೊಂಡಾ ಗ್ರೀಮ್ ಯುಗಾ ಬೈಕ್‌ ಕಳ್ಳತನವಾಗಿರುತ್ತದೆ ಅಂತ ಪವನ್ ರವರು ದೂರು ನೀಡಿದ್ದು ಸ್ವೀಕರಿಸಿ ಬಡಾವಣೆ ಠಾಣಾ ಗುನ್ನೆ ನಂ. 170/2023 ಕಲಂ 379 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ. ದಿನಾಂಕ-18.07.2023 ರಂದು ಬೆಳಗ್ಗೆ ಠಾಣೆಯಲ್ಲಿ ದಾಖಲಾದ ಕನ್ನ ಕಳವು, ಸ್ವತ್ತು ಕಳವು ಹಾಗೂ ಬೈಕ್ ಕಳ್ಳತನ ಪ್ರಕರಣಗಳಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami