ಮನೆ ಕಳವು ಮಾಡುತ್ತಿದ್ದ ಆರೋಪಿಯ ಬಂಧನ : ಮಲ್ಲೇಶ್ವರಂ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 56 Second

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ದಿನಾಂಕ 11-08-2023 ರಂದು ಮನೆಯ ಬಾಗಿಲ ಬೀಗ ಮುರಿದು ಚಿನ್ನ, ಬೆಳ್ಳಿ ಮತ್ತು ಕಂಚಿನ ದೇವರ ಸಾಮಾಗ್ರಿಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು, ಪಿರಾದುದಾರರು ನೀಡಿದ ದೂರಿನ ಮೇರೆಗೆ, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಹಗಲು ಕನ್ನಾ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಕೈಗೊಂಡು ಕಾರ್ಯವ್ಯವೃತ್ತರಾದ ಪೊಲೀಸರು ಕೃತ್ಯ ನಡೆದ ಸ್ಥಳದ ಸಮೀಪದ ಹಲವಾರು ಸಿ.ಸಿ.ಟಿ.ವಿಗಳನ್ನು ಪರಿಶೀಲಿಸಿ, ದಿನಾಂಕ: 14/8/2023 ರಂದು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ, ಸುಮಾರು 1 ಲಕ್ಷ ಬೆಲೆಬಾಳುವ ಕಂಚಿನ, ಬೆಳ್ಳಿಯ, ಹಿತ್ತಾಳೆಯ ದೇವರ ವಿಗ್ರಹಗಳೊನ್ನೊಳಗೊಂಡಂತೆ. ಬೆಳ್ಳಿಯ, ಕಂಚಿನ, ಹಿತ್ತಾಳೆಯ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಮಲ್ಲೇಶ್ವರಂ ಪೊಲೀಸಲು ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದಲ್ಲಿ ಶ್ರೀ ಶಿವಪ್ರಕಾಶ್‌ ದೇವರಾಜು, ಉಪ ಪೊಲೀಸ್‌ ಆಯುಕ್ತರು, ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ. ಕೃಷ್ಣಮೂರ್ತಿ ಕೆ., ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ ಉಪ-ವಿಭಾಗರವರ ನೇತೃತ್ವದಲ್ಲಿ ಶ್ರೀ. ಚಂದ್ರಶೇಖರ್ ಎಂ. ಪೊಲೀಸ್ ಇನ್ಸ್ಪೆಕ್ಟರ್, ಹಾಗೂ ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು
ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸೈಕಲ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ, ವಿವಿಧ ಕಂಪನಿಯ 19 ಸೈಕಲ್ ವಶ

ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರ ಮುಂದೆ ನಿಲ್ಲಿಸಿದ್ದ ಸುಮಾರು 65,000/- ಬೆಲೆ ಬಾಳುವ ಟ್ರಿಕ್ ಬಾಂಡ್‌ನ ನಿಯಾನ್‌ (ಹಸಿರು) ಬಣ್ಣದ ಮಾರ್ಲಿನ್- 7 ಸೈಕಲನ್ನು ದಿನಾಂಕ 14-08-2023 ರಂದು ಯಾರೋ ಕಳವು ಮಾಡಿಕೊಂಡು ಹೋಗಿದ್ದು, ಪತ್ತೆ ಮಾಡಿ ಕೊಡಬೇಕೆಂದು ಏರಾದುದಾರರು ನೀಡಿದ ದೂರಿನ ಮೇರೆಗೆ 29,07,2023 ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಕಾರ್ಯ ಪೃವೃತ್ತರಾದ ಪೊಲೀಸರು ಕೃತ್ಯನಡೆದ […]

Get News on Whatsapp

by send "Subscribe" to 7200024452
Close Bitnami banner
Bitnami