ಮಡಿಕೇರಿ ಪೊಲೀಸರಿಂದ ಕಾರ್ಯಾಚರಣೆ -ಕೊಲೆ ಪ್ರಕರಣ ಪತ್ತೆ, ಆರೋಪಿ ಬಂಧನ

John Prem 9448190523
0 0
Read Time:4 Minute, 2 Second

ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಮನೆಯೊಂದರಲ್ಲಿ ವಾಸವಿದ್ದ ಒಂಟಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ನಗದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಉಪವಿಭಾಗ ಮತ್ತು ಜಿಲ್ಲಾ ಡಿ.ಸಿ.ಐ.ಬಿ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 22-02-2021 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ನಿಡುಗಣೆ ಗ್ರಾಮದ ಮಹೀಂದ್ರಾ ರೆಸಾರ್ಟ್ ಸಮೀಪ ತನ್ನ ಮನೆಯಲ್ಲಿ ವಾಸವಿದ್ದ ಸುಮಾರು 70 ವರ್ಷ ಪ್ರಾಯದ ಒಂಟಿ ಮಹಿಳೆಯನ್ನು ಕೊಲೆಮಾಡಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿ ಪತ್ತೆಯ ಬಗ್ಗೆ ಡಿಸಿಐಬಿ ಹಾಗೂ ಮಡಿಕೇರಿ ಉಪವಿಭಾಗದ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಆರೋಪಿಯ ಬಗ್ಗೆ ಪ್ರಾಥಮಿಕ ತನಿಖಾ ಹಂತದಲ್ಲಿ ಯಾವುದೇ ಸುಳಿವು ಲಭ್ಯವಿರದೆ ಕ್ಲಿಷ್ಟಕರವಾಗಿದ್ದು ಆರೋಪಿ ಪತ್ತೆಯ ಬಗ್ಗೆ ರಚಿಸಲಾಗಿದ್ದ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಖಚಿತ ಮಾಹಿತಿ ಸಂಗ್ರಹಿಸಿ ಮಡಿಕೇರಿಯ ಪ್ರಸಿದ್ದ ಖಾಸಗಿ ರೆಸಾರ್ಟ್ ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ಮೂಲದ ಆರೋಪಿ ಅನಿಲ್ ಎಂಬಾತನನ್ನು ದಿನಾಂಕ 22-03-2021 ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಒಂಟಿ ಮಹಿಳೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣಗಳನ್ನು ಹಾಗೂ ನಗದನ್ನು ದೋಚಿಕೊಂಡು ಹೋಗಿರುವುದು ಧೃಡಪಟ್ಟಿರುತ್ತದೆ. ಬಂಧಿತ ಆರೋಪಿಯು ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿರುತ್ತಾನೆ. ಈತನು ಮೂಡಬಿದ್ರೆ ಹಾಗೂ ಮಂಗಳೂರಿನ ಜ್ಯೂವೆಲರಿ ಶಾಪ್ ಗಳಲ್ಲಿ ಮಾರಾಟ ಮಾಡಿದ ಸುಮಾರು 72 ಗ್ರಾಂ. ಚಿನ್ನಾಭರಣಗಳನ್ನು (ಅಂದಾಜು ಮೌಲ್ಯ 2ಲಕ್ಷದ 80 ಸಾವಿರ) ಹಾಗೂ ಈತನ ಬಳಿಯಿದ್ದ ನಗದು 4000/-ರೂ. ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಮೋಟಾರ್ ಸೈಕಲನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪವಿಭಾಗದ ಡಿವೈ.ಎಸ್.ಪಿ ಬಿ.ಪಿ. ದಿನೇಶ್ ಕುಮಾರ್ ರವರ ನೇತೃತ್ವದಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ರವಿಕಿರಣ್, ಸಿಬ್ಬಂದಿಯವರಾದ ರವಿಕುಮಾರ್, ಮಂಜುನಾಥ್, ದಿನೇಶ್, ಸೋಮಶೇಖರ್ ಸಜ್ಜನ್, ಡಿಸಿಐಬಿ ಎಎಸ್ಐ ಹಮೀದ್, ಸಿಬ್ಬಂದಿಗಳಾದ ಅನಿಲ್ ಕುಮಾರ್, ವೆಂಕಟೇಶ್, ವಸಂತ, ಸುರೇಶ್, ಯೋಗೇಶ್ ಕುಮಾರ್, ನಿರಂಜನ್, ಶರತ್ ರೈ, ಶಶಿಕುಮಾರ್, ಸಿದ್ದಾಪುರ ಠಾಣೆಯ ಎಎಸ್ಐ ತಮ್ಮಯ್ಯ, ಸಿಬ್ಬಂದಿ ಲವಕುಮಾರ್, ಸಿಡಿಆರ್ ಸೆಲ್ ನ ರಾಜೇಶ್ ,ಗಿರೀಶ್ ರವರುಗಳು ಭಾಗವಹಿಸಿದ್ದು ಇವರ ಕಾರ್ಯವನ್ನು ಶ್ಲಾಘಿಸಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯ ಕೆಲವೊಂದು ಕಡೆಗಳಲ್ಲಿ ಕೆಲವೊಬ್ಬರು ಒಬ್ಬಂಟಿಗಳಾಗಿ ವಾಸವಿದ್ದು ಅಪರಿಚಿತರ ಬಗ್ಗೆ ಎಚ್ಚರದಿಂದಿರುವಂತೆ ಹಾಗೂ ಅಪರಿಚಿತರ ಚಲನವಲನದ ಬಗ್ಗೆ ಸಂಶಯ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿ ಅಪರಾಧ ತಡೆಯಲು ಹಾಗು ಪತ್ತೆ ಹಚ್ಚಲು ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ತಿಲಕ್ ನಗರ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ತಿಲಕ್ ನಗರ ಠಾಣಾಧಿಕಾರಿ ಶ್ರೀ .ಎಂ. ಎಲ್. ಗಿರೀಶ್ ಅವರ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ.ದ್ವಿಚಕ್ರ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು, ಕದ್ದ ವಾಹನಗಳನ್ನು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಆಗ್ನೇಯ ವಿಭಾಗದ ಪೊಲೀಸ್ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯಿಂದ ₹4,50,000/- ಮೌಲ್ಯದ 5 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami