ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ದಿನಾಂಕ 02.04.2022 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು.
![\"\"](\"http://kannada.policenewsplus.com/wp-content/uploads/2022/04/WhatsApp-Image-2022-04-04-at-6.30.27-PM-1024x683.jpeg\")
ನಿವೃತ್ತ ಪೊಲೀಸ್ ಅಧೀಕ್ಷಕರಾದ ಶ್ರೀ .ವಿನಯ್ ಎ ಗಾಂವಕರ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ. ದೇವಜ್ಯೋತಿ ರೇ ಐ.ಪಿ.ಎಸ್ ರವರು ವಹಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಐ.ಪಿ.ಎಸ್ , ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನಾವಣೆ ಋಷಿಕೇಶ್ ಭಗವಾನ್ ಐ.ಪಿ.ಎಸ್, ಕೆ.ಎಸ್.ಆರ್.ಪಿ 7ನೇ ಪಡೆಯ ಕಮಾಂಡೆಂಟ್ ಬಿ.ಎಂ ಪ್ರಸಾದ್ ಹಾಗೂ ಜಿಲ್ಲೆಯ ಇತರೆ ಅಧಿಕಾರಿ/ಸಿಬ್ಬಂದಿಗಳು ಹಾಜರಿರುತ್ತಾರೆ. ಈ ಸಂದರ್ಭ ನಡೆದ ಪೊಲೀಸ್ ಪಥಸಂಚಲನದ ನೇತೃತ್ವವನ್ನು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪೊಲೀಸ್ ಪಡೆ ಆರ್.ಪಿ.ಐ ನಾರಾಯಣ ಪೂಜಾರಿ ಯವರು ವಹಿಸಿರುತ್ತಾರೆ.