ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ KSP app ಮೂಲಕ ಮೊಬೈಲ್ ಕಾಣೆಯಾದ ದೂರುಗಳು ಸ್ವೀಕರಿಸಿದ್ದು, ನಂತರ ಸದರಿ ಮೊಬೈಲ್ ಗಳನ್ನು ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್ ಅಡಿಯಲ್ಲಿ ಮೊಬೈಲ್ ಗಳನ್ನು ಬ್ಲಾಕ್ ಮಾಡಲಾಗಿರುತ್ತದೆ.
ಈ ದಿನ ದಿನಾಂಕ:16-12-2025 ರಂದು CEIR ಪೋರ್ಟಲ್ ನಲ್ಲಿ ಪತ್ತೆಹಚ್ಚಿದ ಸುಮಾರು 60 ಮೊಬೈಲ್ ಗಳನ್ನು ಮೊಬೈಲ್ ಕಳೆದುಕೊಂಡ ಅರ್ಜಿದಾರರನ್ನು ಠಾಣೆಗೆ ಕರೆಸಿ ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳಾದ ಭರತೇಶ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ ಮತ್ತು ಗೋಪಾಲಕೃಷ್ಣ ಜೋಗಿ ರವರು ದೂರುದಾರರಿಗೆ ಹಸ್ತಾಂತರ ಮಾಡಿರುತ್ತಾರೆ.
ಈ ಮೊಬೈಲ್ ಪತ್ತೆಯ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಹಾಗೂ ಪೊಲೀಸ್ ಉಪನಿರೀಕ್ಷಕರು ಗಳಾದ ಭರತೇಶ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ ಮತ್ತು ಗೋಪಾಲಕೃಷ್ಣ ಜೋಗಿ ಮತ್ತು ಠಾಣಾ ಗಣಕಯಂತ್ರ ಸಿಬ್ಬಂದಿಯವರಾದ ಸಿಪಿಸಿ ವಿನಯಕುಮಾರ ಮತ್ತು ಸಿಪಿಸಿ ಜಾಸ್ವಾ ಪಾಲ್ಗೊಂಡಿರುತ್ತಾರೆ.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ





