ಭೀಮಾ ಜ್ಯವೆಲ್ಲರ್ಸ್ ಉಡುಪಿ ರವರು ಸಿಎಸ್ಆರ್ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಿರುತ್ತಾರೆ.ದಿನಾಂಕ 01.01.2026 ರಂದು ಭೀಮ ಜ್ಯುವೆಲ್ಲರ್ಸ್ ಉಡುಪಿ ಇದರ ಸೇಲ್ಸ್ ಮತ್ತು ಅಪರೇಶನ್ ಹೆಡ್ ಆದ ಗುರು ಪ್ರಸಾದ್ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಧಾಕರ ಎಸ್ ನಾಯ್ಕ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ, ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪವಿಭಾಗ, ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಉಡುಪಿ ಜಿಲ್ಲೆ ಹಾಗೂ ಭೀಮ ಜ್ಯುವೆಲರ್ಸ್ ಉಡುಪಿ ಇದರ ಬ್ರ್ಯಾಂಚ್ ಮ್ಯನೇಜರ್ ಆಶಿಶ್, ಡೆಪ್ಯುಟಿ ಮ್ಯಾನೇಜರ್, ಸುಧೀರ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಪ್ರಸನ್ನ ಕುಮಾರ್, ಮಾರ್ಕೆಟಿಂಗ್ ಡಿಪಾರ್ಟ್ ಮೆಂಟ್ ನ ಮಂಜುನಾಥ ಅಮೀನ್, ಸೇಲ್ಸ್ ಮತ್ತು ಅಪರೇಶನ್ ಹೆಡ್ ರಾಘವೆಂದ್ರ ಭಟ್ ಹಾಗೂ ಇತರರು ಹಾಜರಿದ್ದರು.
ವರದಿಗಾರ,

ವಿಲ್ಸನ್ ಡಿ’ಸೋಜ







