ಮೈಸೂರು ಜಿಲ್ಲಾ ಪೊಲೀಸರ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು

John Prem

ಜಿಲ್ಲಾ ಅಭಿಯೋಜನಾ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಇಂದು ಕಲಂ 293 CRPC ಅಡಿಯಲ್ಲಿ ನೀಡಲಾದ ತಜ್ಞ ವರದಿಗಳನ್ನು ನ್ಯಾಯಾಲಯಕ್ಕೆ ಹಾಜರ್ಪಡಿಸಿ ಸಾಕ್ಷ್ಯ ನೀಡುವಾಗ ಮತ್ತು ಕೋರ್ಟ್ ನಲ್ಲಿ ವಿಡಿಯೋ ಸಂವಾದ ನಡೆಸುವಾಗ ಅನುಸರಿಸಬೇಕಾದ ನಿಯಮಗಳ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು. ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಶ್ರೀ.ರಘುನಾಥ್ ಎಂ.ಎಲ್ ರವರು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ […]

ಮೈಸೂರು ಜಿಲ್ಲಾ ಪೊಲೀಸರಿಂದ ರಸ್ತೆ ಸುರಕ್ಷತಾ ಕಾರ್ಯಕ್ರಮ

John Prem

ಇಲವಾಲ ಪೊಲೀಸ್ ಠಾಣೆಯಲ್ಲಿಂದು ರಸ್ತೆ ಸುರಕ್ಷತಾ ಕಾರ್ಯಕ್ರಮಕ್ಕೆ ಶಾಸಕರಾದ ಶ್ರೀ.ಜಿ.ಟಿ. ದೇವೇಗೌಡರವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್ ಐಪಿಎಸ್ ರವರು ಸಹ ಹಾಜರಿದ್ದು ಸಾರ್ವಜನಿಕರ ಸುರಕ್ಷತೆಗಾಗಿ ಸಂಚಾರಿ ನಿಯಮಗಳಿದ್ದು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತಗಳನ್ನು ನಿಯಂತ್ರಿಸಿ ಮತ್ತು ಅಪಘಾತ ಸಮಯದಲ್ಲಿ ಜೀವವನ್ನು ಉಳಿಸಬಹುದೆಂದು ತಿಳಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

John Prem

ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು‌. ಖ್ಯಾತ ರಂಗಭೂಮಿ ಕಲಾವಿದರಾದ ಶ್ರೀಮತಿ.ಸರೋಜ ಹೆಗಡೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು‌. ಮುಖ್ಯ ಅತಿಥಿಗಳಾಗಿ ಡಾ.ಅನನ್ಯ ಚೇತನ್ ರವರು , ಮಣಿಪಾಲ್ ಆಸ್ಪತ್ರೆ ಸ್ತ್ರೀ & ಪ್ರಸೂತಿ ತಜ್ಞೆ ಡಾ. ಮಧುರಾ ಪಾಟಕ್ ರವರು ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್‌.ಆರ್.ಐಪಿಎಸ್ ರವರು, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಹಾಗೂ ಜಿಲ್ಲೆಯ ಮಹಿಳಾ ಅಧಿಕಾರಿ […]

ಮೈಸೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem

ಕವಲಂದೆ ಪೊಲೀಸರ ಕಾರ್ಯಾಚರಣೆ 12 ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳ ಬಂಧನ ಸುಮಾರು ಐದು ಲಕ್ಷ ರೂ ಮೌಲ್ಯದ ವಿವಿಧ ಬೈಕ್ ಮತ್ತು ಚಿನ್ನ ವಶ. ಹಾಗೂ ಕೋವಿಡ್ 19 ನಿಯಮಗಳನ್ನು ಮೀರಿ ಬೈಕ್ ರೇಸಿಂಗ್ ವ಼ೀಲಿಂಗ್ ಮಾಡುತ್ತಿದ್ದವರ ಮೇಲೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದರ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು . ಡಿಎಸ್ಪಿ ನಂಜನಗೂಡು ಶ್ರೀ.ಗೋವಿಂದರಾಜು ರವರು, ಸಿಪಿಐ ನಂಜನಗೂಡು […]

ಮೈಸೂರು ಜಿಲ್ಲಾ ಪೊಲೀಸರಿಂದ ನಂಜನಗೂಡು ವಿವಿಧ ಸ್ಥಳಗಳಲ್ಲಿ ಭೇಟಿ ನೀಡಿ ಪರಿಶೀಲನೆ

John Prem

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರಿಂದು ನಂಜನಗೂಡು ಪಟ್ಟಣದ ವಿವಿಧೆಡೆಗಳಲ್ಲಿ ಕಡೆ ಭೇಟಿ ‌ನೀಡಿ ಪರಿಶೀಲಿಸಿದರು.ಇದೇ ವೇಳೆ ಪಟ್ಟಣದ ನಂಜನಗೂಡು ದೇವಸ್ಥಾನ ಬಳಿ ಪರಿಶೀಲಿಸಿದರು.ಇದೇ ವೇಳೆ ಸಂಚಾರಿ‌ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಸಂಚಾರಿ ದೀಪಗಳ ಅಳವಡಿಕೆಗೆ ಸಂಬಂಧಿಸಿದಂತೆ ‌ಡಿಎಸ್ಪಿ ನಂಜನಗೂಡು ಮತ್ತು ಸಿಪಿಐ ನಂಜನಗೂಡು ವೃತ್ತ ರವರಿಗೆ ಸೂಚನೆಗಳನ್ನು ನೀಡಿದರು.

ಕೋವಿಡ್-19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಮೈಸೂರು ಪೊಲೀಸರಿಗೆ ಸಹಾಯ ಮಾಡಲು ‘ಮೈಕಾಪ್’

John Prem

ಒಮಿಕ್ರಾನ್ ಬೆದರಿಕೆಯ ನಡುವೆ, ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಉದ್ದೇಶಿಸಿರುವ ನಿಯಮಗಳನ್ನು ಅನುಸರಿಸಲು ಸಾರ್ವಜನಿಕರ ಮನವೊಲಿಸಲು ಪೊಲೀಸರೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸ್ವಯಂಸೇವಕರನ್ನು ನಿಯೋಜಿಸಲು ಮೈಸೂರು ನಗರ ಪೊಲೀಸರು ನಿರ್ಧರಿಸಿದ್ದಾರೆ.‘ಮೈಕಾಪ್’ ಅಥವಾ ‘ಮೈಸೂರು ಕೋವಿಡ್-19 ಪೋಲೀಸಿಂಗ್’, ಕೋವಿಡ್-19 ಸೂಕ್ತ ನಡವಳಿಕೆಯನ್ನು ಜಾರಿಗೊಳಿಸಲು ಸಹಾಯ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸುವ ಪರಿಕಲ್ಪನೆಯನ್ನು ಸೋಮವಾರ ಇಲ್ಲಿ ಪ್ರಾರಂಭಿಸಲಾಯಿತು.‘MyCoP’ ಅನ್ನು ಪ್ರಾರಂಭಿಸಿದ ನಂತರ ಅದರ ವಿವರಗಳನ್ನು ನೀಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ ಸೋಮವಾರ ಇಲ್ಲಿ […]

“ಕನ್ನಡಕ್ಕಾಗಿ ನಾವು”-ಮೈಸೂರು ನಗರ ಪೊಲೀಸ್

John Prem

ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡಕ್ಕಾಗಿ ನಾವು ” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಿದ್ದು, ದಿನಾಂಕ: 28.10.2021ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಲಕ್ಷ ಕಂಠಗಳ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ನಡೆಸಲು ಆದೇಶಿಸಿದ್ದು ಇದರಂತೆ ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಪೊಲೀಸ್ ಆಯುಕ್ತ ರಾದ ಡಾ: ಚಂದ್ರಗುಪ್ತ ಐ.ಪಿ.ಎಸ್. ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಮೈಸೂರು ಜಿಲ್ಲಾ ಪೊಲೀಸ್- ಠಾಣಾ ಪರಿವೀಕ್ಷಣೆ

John Prem

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರಿಂದು ಹುಣಸೂರು ಪಟ್ಟಣ ಪೊಲೀಸ್ ಠಾಣಾ ಪರಿವೀಕ್ಷಣೆ ನಡೆಸಿದರು. ಇದೇ ವೇಳೆ ಠಾಣಾ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ನೂತನ ಗಸ್ತು ಪದ್ದತಿಯನ್ನು ಪರಿಣಾಮಕಾರಿಯಾಗಿ ಬಳಸಿ ಅಪರಾಧ ತಡೆ ಮತ್ತು ಅಪರಾಧಿಗಳ ಪತ್ತೆ ಬಗ್ಗೆ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದರು.

ಪೊಲೀಸ್ ಹುತಾತ್ಮರ ದಿನಾಚರಣೆ -ಮೈಸೂರು ಜಿಲ್ಲಾ ಪೊಲೀಸ್

John Prem

ಇಂದು ನಡೆದ ಪೊಲೀಸ್ ಹುತಾತ್ಮರ ದಿನಚಾರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ಸೂಚಿಸಿ ಹೂಗುಚ್ಚ ಇರಿಸಿ ಸ್ಮರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಎಂ.ಎಲ್.ರಘುನಾಥ್ ರವರು , ದಕ್ಷಿಣ ವಲಯ ಐಜಿಪಿ ರವರಾದ ಶ್ರೀ.ಪ್ರವೀಣ್ ಮಧುಕರ್ ಪವಾರ್,ಐಪಿಎಸ್, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ,ಐಪಿಎಸ್, ಕೆಪಿಎ ನಿರ್ದೇಶಕರಾದ ಶ್ರೀ.ವಿಪುಲ್ ಕುಮಾರ್,ಐಪಿಎಸ್ ರವರು, ಜಿಲ್ಲಾ […]

ಮೈಸೂರು ಜಿಲ್ಲಾ ಪೊಲೀಸ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆ

John Prem

ಮೈಸೂರು ಚಾಮರಾಜನಗರ ಜಿಲ್ಲಾ ಪೊಲೀಸ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಉದ್ಘಾಟಿಸಿದರು. ಇದೇ ವೇಳೆ ಕರ್ತವ್ಯದಿಂದ ನಿವೃತ್ತರಾದ ಅಧಿಕಾರಿ ಸಿಬ್ಬಂದಿಗಳನ್ನು ಬೀಳ್ಕೋಟ್ಟು, ನಿವೃತ್ತಿ ಹೊಂದಿದ್ದಂತಹ ಅಧಿಕಾರಿ ಸಿಬ್ಬಂದಿಗಳನ್ನು ಸಂಘದ ವತಿಯಿಂದ ಅಭಿನಂದಿಸಿದರು. ಅಲ್ಲದೆ ಕ್ರೀಡೆ ವಿದ್ಯಾಭ್ಯಾಸಗಳಲ್ಲಿ ಉತ್ತಮ ಸಾಧನೆಗೈದಿರುವ ಅಧಿಕಾರಿ‌ ಸಿಬ್ಬಂದಿಗಳ ಮಕ್ಕಳನ್ನು ಪ್ರೋತ್ಸಾಹಿಸಿ ಸನ್ಮಾನಿಸಲಾಯಿತು.ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ.ಆರ್. ಶಿವಕುಮಾರ್ ರವರು ಹಾಗೂ ಪೊಲೀಸ್ ಅಧಿಕಾರಿ […]

Get News on Whatsapp

by send "Subscribe" to 7200024452
Close Bitnami banner
Bitnami