ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ಎಲ್ಲ ಪೊಲೀಸ ಠಾಣೆಯ ಸಿಬ್ಬಂದಿಗಳಿಗೆ ಸ್ಮಾರ್ಟ್ ಇ-ಬೀಟ್, ಕೆ.ಜಿ.ಎಸ್.ಸಿ(ಸಕಾಲ), ಪೊಲೀಸ ಐ.ಟಿ ವಿಷಯದ ಕುರಿತು ಕಾರ್ಯಾಗಾರವನ್ನು ಮಾನ್ಯ ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಭಾ.ಪೊ.ಸೇ.ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹಿರಿಯ ಪೊಲೀಸ ಅಧಿಕಾರಿಗಳು ಹಾಗೂ ನುರಿತ ಸಿಬ್ಬಂದಿಯವರಿಂದ ತರಬೇತಿ ನೀಡಲಾಯಿತು.
Kalaburagi City Police
ಕಲಬುರಗಿ ನಗರ ಸಿ.ಸಿ.ಬಿ ಪೊಲೀಸರಿಂದ ಕಾರ್ಯಾಚರಣೆ
ಕಲಬುರಗಿ ನಗರದ ಸಿ.ಸಿ.ಬಿ ಪೊಲೀಸರಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. ಕಲಬುರಗಿ ನಗರದ ರೋಜಾ ಪೊಲೀಸ ಠಾಣೆಯ ವ್ಯಾಪ್ತಿಯ ಸಂತ್ರಾಸವಾಡಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 1.5 kg ಕೆಜಿ ಒಣ ಗಾಂಜಾ ಹಾಗೂ 4 ಕೆಜಿ ಹಸಿ ಅಕ್ರಮ ಗಾಂಜಾ , 2500 ರೂಪಾಯಿ ನಗದು ಹಣ ಹಾಗೂ 1 ಬೈಕ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಕಲಬುರಗಿ ನಗರ ಪೊಲೀಸರಿಂದ ಕಾನೂನು & ಸುವ್ಯವಸ್ಥೆ ಹಾಗೂ ಅಪರಾಧ ವಿಮರ್ಶನಾ ಸಭೆ
ದಿನಾಂಕ: 06-12-2021 ರಂದು ಮಾನ್ಯ ಶ್ರೀ. ಪ್ರವೀಣ್ ಸೂದ್, ಭಾ.ಪೊ.ಸೇ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಕರ್ನಾಟಕ ರಾಜ್ಯ, ಬೆಂಗಳೂರು ರವರು ಕಲಬುರಗಿ ನಗರ ಮತ್ತು ಜಿಲ್ಲಾ ಘಟಕಕ್ಕೆ ಭೇಟಿ ನೀಡಿ ಕಲಬುರಗಿ ನಗರ ಮತ್ತು ಜಿಲ್ಲೆಯಲ್ಲಿನ ಕಾನೂನು & ಸುವ್ಯವಸ್ಥೆ ಹಾಗೂ ಅಪರಾಧ ವಿಮರ್ಶನಾ ಸಭೆಯನ್ನು ಕೈಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ. ಮನಿಷ ಖರ್ಬಿಕರ್,ಭಾ.ಪೊ.ಸೇ. ಪೊಲೀಸ್ ಮಹಾನಿರೀಕ್ಷಕರು, ಈಶಾನ್ಯ ವಲಯ ಮತ್ತು ಶ್ರೀ ಡಾ.ವೈ.ಎಸ್.ರವಿಕುಮಾರ, ಭಾ.ಪೊ.ಸೇ. […]
ಕಲಬುರಗಿ ನಗರ ಪೊಲೀಸ್ ವತಿಯಿಂದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನ ಸಮಾರಂಭ
ಕಲಬುರಗಿ ನಗರದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನ ಸಮಾರಂಭವನ್ನು ಮಾನ್ಯ ಶ್ರೀ ನಿರಂಜನ ವಿ.ನಿಷ್ಠಿ, ಉಪಕುಲಪತಿಗಳು ಶರಣಬಸವೇಶ್ವರ ವಿಶ್ವವಿದ್ಯಾಲಯ ಕಲಬುರಗಿ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿ.ವಿ.ಜ್ಯೋತ್ಸ್ನ, ಭಾ.ಆ.ಸೇ. ಜಿಲ್ಲಾಧಿಕಾರಿಗಳು ಕಲಬುರಗಿ , ಅಧ್ಯಕ್ಷತೆಯನ್ನು ಶ್ರೀ ಡಾ.ವೈ.ಎಸ್.ರವಿಕುಮಾರ, ಭಾ.ಪೊ.ಸೇ. ಪೊಲೀಸ ಆಯುಕ್ತರು ಕಲಬುರಗಿ ನಗರ ಹಾಗೂ ಶ್ರೀ ದಿಲೀಷ ಶಶಿ, ಭಾ.ಆ.ಸೇ ಮತ್ತು ಶ್ರೀ ಅಡ್ಡೂರು ಶ್ರೀನಿವಾಸುಲು, ಭಾ.ಪೊ.ಸೇ.ಉಪ ಪೊಲೀಸ ಆಯುಕ್ತರು ಕಲಬುರಗಿ ನಗರರವರು ಪಾರಿವಾಳ ಹಾರಿ ಬಿಡುವ ಮೂಲಕ […]
“ತಡೆ ಅರಿವು ನಡೆ”-ಕಲಬುರಗಿ ನಗರ ಪೊಲೀಸ್
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ವಿರುದ್ದ “ತಡೆ ಅರಿವು ನಡೆ” ಜಾಥಾ ನಡೆಸಲಾಯಿತು. ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಭಾ.ಪೊ.ಸೇ.ರವರು ಜಾಥಾಗೆ ಚಾಲನೆ ನೀಡಿದರು. ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ಎಲ್ಲ ಹಿರಿಯ ಕಿರಿಯ ಪೊಲೀಸ ಅಧಿಕಾರಿ ಸಿಬ್ಬಂದಿಯವರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಸಂಚಾರ ಕಾನೂನು ಅರಿವು ಕಾರ್ಯಕ್ರಮ-ಕಲಬುರಗಿ ನಗರ ಪೊಲೀಸ್
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾಧಿಗಳ ಸಂಘ, ಜಿಲ್ಲಾ ನ್ಯಾಯಾಲಯ ಕಲಬುರಗಿ ಹಾಗೂ ಪೊಲೀಸ ಆಯುಕ್ತಾಲಯ ಕಲಬುರಗಿ ವತಿಯಿಂದ ಕಲಬುರಗಿ ನಗರದ ಸರ್ದಾರ ವಲ್ಲಭಾಯಿ ವೃತ್ತದಲ್ಲಿ ಸಂಚಾರ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಕೆ.ಸುಬ್ರಹ್ಮಣ್ಯ,ರವರು , ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ,ಐಪಿಎಸ್, ಉಪ ಪೊಲೀಸ ಆಯುಕ್ತರಾದ ಶ್ರೀ.ಅಡ್ಡೂರು ಶ್ರೀನಿವಾಸುಲು, ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ […]
ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ-ಕಲಬುರಗಿ ನಗರ ಪೊಲೀಸ್
ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ.ವೈ.ಎಸ್.ರವಿಕುಮಾರ, ಐ.ಪಿ.ಎಸ್. ರವರು ಕಚೇರಿಯ ಸಿಬ್ಬಂದಿಗಳಿಗೆ ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಐ.ಪಿ.ಎಸ್(ಕಾ&ಸು)ರವರು ಹಾಗೂ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು. ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಜಾತಿ ಧರ್ಮ ಪ್ರದೇಶ ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ […]
ಕಲಬುರ್ಗಿ ಜಿಲ್ಲಾ ಪೊಲೀಸರಿಂದ ಐವರ ಹಂತಕರ ಬಂಧನ
ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು. ಕೊಲೆಯಾದ ವ್ಯಕ್ತಿಗೆ […]
ಗದಗ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಟಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಎರಡು ಜನ ಅಪರಾಧಿಗಳನ್ನು ದಸ್ತಗಿರಿ ಮಾಡಿ ಅವರಿಂದ 50 ಗ್ರಾಂ ಬಂಗಾರ ಹಾಗೂ 500 ಗ್ರಾಂ ಬೆಳ್ಳಿಯ ಆಭರಣಗಳು & ಒಂದು ಬೈಕನ್ನು ವಶಪಡಿಸಿಕೊಂಡಿದ್ದು, ಅಂ.ಕಿ ರೂ. 2,35,610/-. ಪ್ರಕರಣದ ತನಿಖೆ ಮುಂದುವರೆದಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್
ಕಲಬುರಗಿ ನಗರ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಗ್ಯಾಂಗ್ ಬಂಧನ
ಕಲಬುರಗಿ ನಗರದ ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾದ ಗ್ರಾಮೀಣ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ ಆಯುಕ್ತರಾದ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ರವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಆರೋಪಿ ತೀರಾ ದಸ್ತಗಿರಿ ಕುರಿತು ಮಾನ್ಯ ಎನ್. ಸತೀಶ್ ಕುಮಾರ್ ಐ.ಪಿ.ಎಸ್. ಪೊಲೀಸ್ ಆಯುಕ್ತರು ಕಲಬುರಗಿ ನಗರ ಮತ್ತು ಮಾನ್ಯ ಡಿ. ಕಿಶೋರ್ ಬಾಬು ಐ.ಪಿ.ಎಸ್. ಪೊಲೀಸ್ ಉಪ ಆಯುಕ್ತರು ಕಲಬುರಗಿ ನಗರ […]