ಅಕ್ರಮ ಗಾಂಜಾ ಮಾರಾಟ ಪ್ರಕರಣ

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡ ಪತ್ತೆ ಮಾಡಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿತರಿಂದ 9 ಕೆ.ಜಿ 500 ಗ್ರಾಂ ಗಾಂಜಾ ಮತ್ತು 6.2 ಗ್ರಾಂ ಎಂ.ಡಿ.ಎಂ.ಎ ಮಾದಕವಸ್ತು, ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್‌ ಪೋನ್‌, ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಆರ್.ವಿ.ಗಂಗಾಧರಪ್ಪ, ಡಿವೈಎಸ್‌ಪಿ, ಸೋಮವಾರಪೇಟೆ ಉಪ […]

ಸಿಸಿಬಿ ಪೊಲೀಸ ಕಾರ್ಯಾಚರಣೆ 2.88ಕೋಟಿ ರೂ. ಬೆಲೆಯ ಮೂರು ಕಾರುಗಳು, ಚಿನ್ನದ ಆಭರಣಗಳು ಹಾಗೂ ನಗದು ವಶ

ರೈಸ್‍ಫುಲ್ಲಿಂಗ್ ಮಿಷನ್ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2.88ಕೋಟಿ ರೂ. ಬೆಲೆಯ ಮೂರು ಕಾರುಗಳು, ಚಿನ್ನದ ಆಭರಣಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ನಟೇಶ್ ಅಲಿಯಾಸ್ ವೆಂಕಟರಮಣ (44), ವೆಂಕಟೇಶ್ (47) ಮತ್ತು ಸೋಮಶೇಖರ್ (47) ಬಂಧಿತ ಆರೋಪಿಗಳು.ಬಂಧಿತರಿಂದ ರೈಸ್‍ಫುಲ್ಲಿಂಗ್ ಯಂತ್ರ, ಬೆಂಚ್ ಕಾರು, ಫಾರ್ಚೂನೊ ಕಾರು, ಸ್ಕಾರ್ಫಿಯೋ ಕಾರು, 28 ಲಕ್ಷ ಹಣ ಹಾಗೂ ಒಂದು ಕೆಜಿ […]

ಅಕ್ರಮ ಮಾದಕ ವಸ್ತು ಮಾರಾಟ ಪ್ರಕರಣ ಕೊಡಗು ಜಿಲ್ಲಾ ಪೊಲೀಸರಿಂದ ಕಾರ್ಯಚರಣೆ

ಕೊಡಗು ಜಿಲ್ಲಾ ವಾಪ್ತಿಯ ಕುಶಾಲನಗರ ಗ್ರಾಮಾಂತರ ಠಾಣಾ ಸರಹದ್ದಿನಲ್ಲಿ MDMA (Methylenedioxy Methamphetamine) ಎಂಬ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ದಿನಾಂಕ: 29.03.2023 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆ ಮೇರೆ ಸ್ಥಳೀಯ ಪೊಲೀಸ್ ಅಧಿಕಾರಿಗಳಾದ ಗಂಗಾಧರಪ್ಪ ಆರ್.ವಿ ಡಿವೈ.ಎಸ್.ಪಿ ಸೋಮವಾರಪೇಟೆ ಉಪವಿಭಾಗ, […]

ಕಳವು ಪ್ರಕರಣ ಪತ್ತೆ, ಆರೋಪಿ ಬಂಧನ:

ಪೊನ್ನಂಪೇಟೆ ಮತ್ತು ಗೋಣಿಕೊಪ್ಪ ಠಾಣಾ ಸರಹದ್ದಿನಲ್ಲಿ ವ್ಯಾಪಾರ ಮಳಿಗೆಗಳ ಕ್ಯಾಶ್ ಕೌಂಟರಿನಿಂದ ಹಣ ಕಳ್ಳತನ ಮಾಡಿದ್ದ 3 ಪ್ರತ್ಯೇಕ ಪ್ರಕರಣಗಳನ್ನು ಪೊನ್ನಂಪೇಟೆ ಠಾಣೆ ಪೊಲೀಸರ ಪತ್ತೆ ಮಾಡಿ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಪ್ರಕರಣ-1 ದಿನಾಂಕ: 20-04-2022 ರಂದು ರಾತ್ರಿ ಪೊನ್ನಂಪೇ‌ಟೆ ನಿವಾಸಿ ಸೀತಾರಾಮ್‌ ಎಂಬುವವರು ಕಾಫಿ ಅಂಗಡಿಯ ಶೆಟರ್ಸ್‌ ಬೀಗ ವನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಕ್ಯಾಶ್‌ ಬಾಕ್ಸ್‌ ನಲ್ಲಿ ಇಟ್ಟಿದ್ದ ₹. 1,12,500 ನಗದು ಹಣವನ್ನು […]

ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೂರು ಹೊಸ್ಕೇರಿ ಗ್ರಾಮದ ಕೂತಂಡ ಸುಬ್ಬಯ್ಯರವರ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ವೃತ್ತ ಮತ್ತು ಡಿಸಿಆರ್‌ಬಿ ಘಟಕದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ. ದಿನಾಂಕ: 12-06-2022 ರಂದು ವಿರಾಜಪೇಟೆ ತಾಲ್ಲೂಕು ಮೇಕೂರು ಹೊಸ್ಕೇರಿ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮುಂಬಾಗಿಲಿನ ಬೀಗವನ್ನು ಮುರಿದು […]

ಕೊಡಗು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ

ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕರಡಿಗೋಡು ಗ್ರಾಮದ ಇವಾಲ್ ಬ್ಯಾಕ್ ರೆಸಾರ್ಟ್ ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಯವರು ಹಾಗೂ ಕೊಡಗು ಡಿ.ಸಿ.ಆರ್.ಬಿ ಘಟಕದ ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 01-04-2022 ರಂದು ಮುಂಬೈನಿಂದ ಬಾಲಕೃಷ್ಣ ಭಂಡಾರಿ ಮತ್ತು ಅವರ ಸಂಸಾರದವರು ಸಿದ್ದಾಪುರದ ಕರಡಿಗೋಡಿನ ಇವಾಲ್ ಬ್ಯಾಕ್ […]

ಕೊಡಗು ಜಿಲ್ಲೆ ಸಿದ್ದಾಪುರ ಪೊಲೀಸ್ ಠಾಣೆ ಅವರಿಂದ ಯಶಸ್ವಿ ಕಾರ್ಯಾಚರಣೆ

ಕೊಡಗು ಜಿಲ್ಲೆ ವಿರಾಜಪೇಟೆ ತಾಲೋಕು ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದಲ್ಲಿ ವಾಮಾಚಾರ ನಡೆಸಿ ನಿಧಿ ಶೋಧನೆ ನಡೆಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ 08-01-2022ರಂದು ಖಚಿತ ಮಾಹಿತಿ ಮೇರೆ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್ ಗಣೇಶ್ ಎಂಬವರ ಮನೆಗೆ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ವಾಮಾಚಾರ ನಡೆಸಿ ನಿಧಿ ಶೋಧನೆಯಲ್ಲಿ ತೊಡಗಿದ್ದ ಎಂ.ಆರ್ ಗಣೇಶ್ […]

ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚಿ ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು […]

ನಾಪೋಕ್ಲು ಪೊಲೀಸರ ಕಾರ್ಯಾಚರಣೆ. ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ.

ಜಿಲ್ಲೆಯ ನಾಪೋಕ್ಲು ನಗರದ ನಂದಿ ಚಿನ್ನದಂಗಡಿಗೆ ಮೂವರು ವ್ಯಕ್ತಿಗಳು ಬಂದು ‌ನಕಲಿ ಚಿನ್ನವನ್ನು ಗಿರವಿ ಇಟ್ಟು ಮುಂಗಡವಾಗಿ 20,000/- ಹಣವನ್ನು ಪಡೆದುಕೊಂಡಿದ್ದು,ಅನುಮಾನಗೊಂಡ ಅಂಗಡಿ ಮಾಲೀಕ ಪರೀಕ್ಷಿಸಿದಾಗ 22 ಕ್ಯಾರೆಟ್ ಚಿನ್ನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತಾಮ್ರವನ್ನು ಸೇರಿಸಿರುವುದು ಕಂಡು ಬಂದಿದ್ದು, ಅದೇ ವೇಳೆಗೆ ಮೂವರು ಆರೋಪಿಗಳು ಅಂಗಡಿಯಿಂದ ಪರಾರಿಯಾಗಿದ್ದು ಈ ಸಂಬಂಧ ಅಂಗಡಿ ಮಾಲೀಕರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ […]

ನಕಲಿ ನೇಮಕಾತಿ ಆದೇಶ ನೀಡಿ ವಂಚಿಸಿದ ವ್ಯಕ್ತಿಗಳ ಬಂಧನ

ಕೊಡಗು ಜಿಲ್ಲೆ ಹಾಗೂ ಹೊರ ಜಿಲ್ಲೆಯ ವ್ಯಕ್ತಿಗಳಿಗೆ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ ನಕಲಿ ನೇಮಕಾತಿ ಆದೇಶ ನೀಡಿ ಕೋಟ್ಯಾಂತರ ರೂಪಾಯಿ ಹಣ ವಂಚಿಸಿದ ಕುಖ್ಯಾತ ವ್ಯಕ್ತಿಯೊಬ್ಬನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲೆಯ ಡಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಉಪ ನಿರೀಕ್ಷಕ ಹುದ್ದೆ ಕೊಡಿಸುವುದಾಗಿ ನಕಲಿ ನೇಮಕಾತಿ ಆದೇಶ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಡಿಕೇರಿ ನಗರದ ನಿವಾಸಿಯೊಬ್ಬರು ಮಡಿಕೇರಿ ನಗರ ಪೊಲೀಸ್ ಠಾಣೆಗೆ […]

Get News on Whatsapp

by send "Subscribe" to 7200024452
Close Bitnami banner
Bitnami